ಎರಡೇ ದಿನಕ್ಕೆ ರಸ್ತೆ (Road) ಗೆ ಹಾಕಿದ್ದ ಡಾಂಬರು ಕಿತ್ತುಬಂದಿರುವ ಘಟನೆ ಮಂಡ್ಯ (Mandya) ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ನಾಯಕನಹಳ್ಳಿಯಲ್ಲಿ ನಡೆದಿದೆ. ಕಳಪೆ ರಸ್ತೆ ಕಾಮಗಾರಿ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ರಸ್ತೆಗೆ ಹಾಕಿದ ಡಾಂಬರ್ ಕಿತ್ತು ಕಳಪೆ ಕಾಮಗಾರಿಯನ್ನು ಗ್ರಾಮಸ್ಥರು ತೋರಿಸಿದ್ದಾರೆ.
ನವೆಂಬರ್ 11 ರಂದು ಗ್ರಾಮದ ರಸ್ತೆಗೆ ಡಾಂಬರೀಕರಣ ಹಾಕಿದ್ದರು. ಅಭಿವೃದ್ಧಿಯ ಹೆಸರಲ್ಲಿ ಗುತ್ತಿಗೆದಾರ ಕಳೆಪೆ ಕಾಮಗಾರಿ ನಡೆಸ್ತಿದ್ದಾರೆ. ಗುತ್ತಿಗೆದಾರನ ಜೊತೆ ಅಧಿಕಾರಿಗಳು ಶಾಮೀಲಾಗಿರೋ ಆರೋಪ ಮಾಡಲಾಗಿದೆ. ಕಳಪೆ ಕಾಮಗಾರಿ ನಡೆಸಿರೋ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : – ಇನ್ಸ್ಟಾಗ್ರಾಮ್ ನಲ್ಲಿ ವೀವ್ಸ್ ಹಾಗೂ ಫಾಲೋವರ್ಸ್ ಗಾಗಿ ಯುವಕರ ಡೆಡ್ಲಿ ವ್ಹೀಲಿಂಗ್