ಚೀನಾ ( CHINA ) ದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಭಾರತೀಯ ವಾಯುಪಡೆ ಅರುಣಾಚಲ ಪ್ರದೇಶದಲ್ಲಿ ಸಕ್ರಿಯ ಯುದ್ಧ ವಿಮಾನ ಗಸ್ತು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಭಾರತ ಸೇನೆಯ ಮೂರು ಪಡೆಗಳು ಮುಖ್ಯಸ್ಥರ ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ( RAJANATAH SINGH ) ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆ ಬಗ್ಗೆ ಸಭೆ ನಡೆಸಲಿದ್ದಾರೆ. ಇದನ್ನು ಓದಿ : –ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ
ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ. ಜೊತೆಗೆ ವಿದೇಶಾಂಗ ಸಚಿವ ಡಾ ಎಸ್ .ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನು ಓದಿ : – ಭಾರತ-ಚೀನಾ ಗಡಿಯಲ್ಲಿ ಸೈನಿಕರ ಸಂಘರ್ಷ – ಮಧ್ಯಾಹ್ನ ಸಂಸತ್ತಿನ ಉಭಯ ಸದನಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಷಣ