ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಮತ್ತು ರಾಹುಲ್ ತವಾಟಿಯಾ ಸಮಯೋಚಿತ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರು ಮಾಡಿದರು.
ಮುಂಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಗೆ 170 ರನ್ ಗಳಿಸಿತು.
ರಾಜಸ್ಥಾನ್ ತಂಡ ಒಂದು ಹಂತದಲ್ಲಿ 43 ರನ್ ಗೆ 4 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ರಿಯಾನ್ ಪರಾಗ್ ಮತ್ತು ಶಿವಂ ದುಬೆ 5ನೇ ವಿಕೆಟ್ ಗೆ 66 ರನ್ ಪೇರಿಸಿ ತಂಡವನ್ನು ಆಧರಿಸಿದರು.
ಶಿವಂ ದುಬೆ 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 46 ರನ್ ಬಾರಿಸಿ ಔಟಾದರೆ, ರಿಯಾನ್ 16 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ 25 ರನ್ ಗಳಿಸಿದರು. ಇವರಿಬ್ಬರ ನಿರ್ಗಮನದ ನಂತರ ರಾಹುಲ್ ತವಾಟಿಯಾ 23 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದ 40 ರನ್ ಬಾರಿಸಿ ತಂಡವನ್ನು ಉತ್ತಮ ಮೊತ್ತದತ್ತ ತಂದು ನಿಲ್ಲಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಕೈಲ್ ಜೇಮಿನ್ಸನ್, ವಾಷಿಂಗ್ಟನ್ ಸುಂದರ್ ಮತ್ತು ಕೇನ್ ರಿಚರ್ಡ್ಸನ್ ತಲಾ 1 ವಿಕೆಟ್ ಪಡೆದರೆ, ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತೊಮ್ಮೆ ವಿಕೆಟ್ ಪಡೆಯದೇ ನಿರಾಸೆ ಅನುಭವಿಸಿದರು.