ಹೊಸಪೇಟೆಯಲ್ಲಿ ದೊಡ್ಡ ಹನುಮಂತಪ್ಪ ಎಂಬ ಗುತ್ತಿಗೆದಾರನ ಮನೆಯ ಮೇಲೆ IT ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರು ಮತ್ತು ಹುಬ್ಬಳ್ಳಿಯಿಂದ ಎರಡೂ ಕಾರ್ ಗಳಲ್ಲಿ ತಲಾ ಮೂರ್ನಾಲ್ಕು ಜನ IT ಅಧಿಕಾರಿಗಳು ಆಗಮಿಸಿದ್ದರು.
![](https://rajnewskannada.in/wp-content/uploads/2022/06/WhatsApp-Image-2022-06-15-at-1.09.39-PM-1024x576.jpeg)
ಹೊಸಪೇಟೆಯ ನೆಹರು ಕಾಲೋನಿಯಲ್ಲಿರೋ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕುಡುತಿನಿ ನಿವಾಸಿ ಹನುಮಂತಪ್ಪ ಗುತ್ತಿಗೆ ದಾರರಾಗಿದ್ದು ಸದ್ಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಪೈಪ್ ಲೈನ್ ಅಳವಡಿಸುವ ಕೋಟ್ಯಾಂತರ ಮೌಲ್ಯದ ಗುತ್ತಿಗೆ ಪಡೆದುಕೊಂಡಿದ್ದರು. ಇದಲ್ಲದೆ ಹಲವು ಸರ್ಕಾರಿ ಯೋಜನೆಗಳ ಗುತ್ತಿಗೆಯನ್ನು ಪಡೆದುಕೊಂಡಿದ್ದಾರೆ. ಕಾಮಗಾರಿ ವೇಳೆ ದೊಡ್ಡ ಮೊತ್ತದ ತೆರಿಗೆ ವಂಚನೆ ಮಾಡಲಾಗಿದೆ. ಗುತ್ತಿಗೆದಾರ ದೊಡ್ಡ ಹನುಮಂತಪ್ಪಗೆ ಸೇರಿದ ಮತ್ತೊಂದು ಮನೆಯ ಮೇಲೆ IT ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : – ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್