ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದಕೊಂಡ ಜಮೀರ್…! ದೆಹಲಿಗೆ ಹೈಕಮಾಂಡ್ ಬುಲಾವ್

ಸಿದ್ದರಾಮಯ್ಯ (Siddaramaiah) ಮುಂದಿನ ಸಿಎಂ ಎಂಬ ಹೇಳಿಕೆ ನೀಡಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಜಮೀರ್ ಅಹ್ಮದ್ (Zameer ahamed) ಕಾಂಗ್ರೆಸ್ ಗೆ ಸೆಡ್ಡು ಹೊಡೆದಿದ್ದಾರೆ.

ಸಿದ್ದರಾಮಯ್ಯ (Siddaramaiah) ಮುಂದಿನ ಸಿಎಂ ಎಂಬ ಹೇಳಿಕೆ ನೀಡಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಜಮೀರ್ ಅಹ್ಮದ್ (Zameer ahamed) ಕಾಂಗ್ರೆಸ್ ಗೆ ಸೆಡ್ಡು ಹೊಡೆದಿದ್ದಾರೆ. ಇದರಿಂದ ತತ್ತರಿಸಿದ ಹೈಕಮಾಂಡ್ ಕಳೆದ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ ದೂರವಾಣಿ ಮೂಲಕ ಕರೆ ಮಾಡಿ ತುರ್ತಾಗಿ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

Poll debacle may put Congress on brink of losing LoP post in Rajya Sabha |  India News - Times of India

ಹೈಕಮಾಂಡ್ ಸೂಚನೆ ಮೇರೆಗೆ ಜಮೀರ್ ದೆಹಲಿ (Delhi) ಗೆ ತೆರಳಿದ್ದಾರೆ. ಇತ್ತೀಚಿಗೆ ಜಮೀರ್ ಕೆ ಸಿ ಆರ್ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಪ್ರತ್ಯೇಕ ಬಸ್ ಯಾತ್ರೆ ಮಾಡಲು ಪ್ಲ್ಯಾನ್ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ (High command)  ಬುಲಾವ್ ನೀಡಿದೆ ಎನ್ನಲಾಗಿದೆ. ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು. ಪಕ್ಷದಲ್ಲಿ ಆಂತರಿಕ ಅಸಮಧಾನ ಇದ್ದಲ್ಲಿ ಹೈಕಮಾಂಡದ ನಾಯಕರ ಗಮನಕ್ಕೆ ತರಬೇಕು. ನೀವೇ ಸ್ವಂತ ನಿರ್ಧಾರ ಕೈಗೊಳ್ಳುವಂತಿಲ್ಲ. ಚುನಾವಣೆ ಹತ್ತಿರ ಬಂದಂತೆ ಈ ರೀತಿ ನಡುವಳಿಕೆ ಸರಿ ಅಲ್ಲ. ಕಾಂಗ್ರೆಸ್ ಪಕ್ಷ ನಿಮ್ಮನ್ನು ಯಾವತ್ತೂ ಕಡೆಗಣನೆ ಮಾಡಿಲ್ಲ ಎಂದು ಸುರ್ಜೆವಾಲಾ ಜಮೀರ್ ಅಹ್ಮದ್ ಖಾನ್ ಗೆ ಸಲಹೆ ಮತ್ತು ಸೂಚನೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : – ರಾಮನಗರದಲ್ಲಿ ಅಶ್ವತ್ಥ ನಾರಾಯಣ ಮಂದಿರವನ್ನೂ ಕಟ್ಟಲಿ- ಡಿಕೆಶಿ ವ್ಯಂಗ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!