ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

ರಾಜ್ಯ ಸಭಾ ಚುನಾವಣೆಯಲ್ಲಿ (Rajyasabha election) ಅಡ್ಡ ಮತದಾನ ಮಾಡಿದ ಶಾಸಕರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ಪಕ್ಷದವರು (JDS) ಫ್ರೀಡಂ ಪಾರ್ಕ್ (Freedom park) ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸಭೆ ಸ್ಪೀಕರ್ (Vidhanasabha speaker) ಅವರಿಗೆ ದೂರು ಕೊಡುತ್ತೇವೆ ಎಂದು ಆಗ್ರಹಿಸಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ (Gubbi srinivas) ಹಾಗೂ ಕೋಲಾರದ ಶ್ರೀನಿವಾಸಗೌಡ (Kolar srinivasgowda) ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನಮ್ಮ ಶಾಸಕರು ಅಡ್ಡ ಮತದಾನ ಮಾಡ್ಲಿಕ್ಕೆ ಸಿದ್ದರಾಮಯ್ಯ (Siddaramaiah) ನವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರನ್ನು ಪ್ರಾಣಿಗಳಂತೆ ಬಳಿಸಿಕೊಂಡ ರಾಷ್ಟ್ರೀಯ ಪಕ್ಷಗಳಿಗೆ ದಿಕ್ಕಾರ ಎಂದು ಬೋರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷ ಇಬ್ರಾಹಿಂ (Ibrahim) , ತಿಪ್ಪೆಸ್ವಾಮಿ, ಕುಪೇಂದ್ರ ರೆಡ್ಡಿ (Kupendra reddy) , ಆರ್.ಪ್ರಕಾಶ್ ವಿಧಾನ ಪರಿಷತ್ ಸದಸ್ಯ ಟಿ. ಶರವಣ (T.Sharavana) ಭಾಗಿಯಾಗಿದ್ದಾರೆ. ಇದನ್ನೂ ಓದಿ : – ಸಿದ್ದರಾಮಯ್ಯ ಒಬ್ಬ ಶಕುನಿ ಇದ್ದಂತೆ – MLC ಚೆಲುವಾದಿ ನಾರಾಯಣಸ್ವಾಮಿ

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಗೆಲ್ಲಲು ಸಹಕರಿಸಿದ ಸಿದ್ದರಾಮಯ್ಯಗೆ , ಬಿಜೆಪಿಯ ಬಿ ಟೀಮ್ ಕಾಂಗ್ರೆಸ್ ಗೆ .,ಪಕ್ಷಾಂತರಿಗಳಿಗೆ ಪ್ರೋತ್ಸಾಹ ನೀಡಿದ ರಾಷ್ಟ್ರೀಯ ಪಕ್ಷಗಳಿಗೆ ,ಶಾಸಕರನ್ನು ಪ್ರಾಣಿಗಳಂತೆ ಖರೀದಿಸಿದ ರಾಷ್ಟ್ರೀಯ ಪಕ್ಷಗಳಿಗೆ ದಿಕ್ಕಾರ ಎಂದು ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಾರೆ.
ಇದೇ ವೇಳೆ ಎಂಎಲ್ಸಿ ತಿಪ್ಪೇಸ್ವಾಮಿ ಅಡ್ಡ ಮತದಾನದ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ವಿವರಣೆ ನೀಡುತ್ತಿದ್ದ ವೇಳೆ ಕೋಲಾರ ಶ್ರೀನಿವಾಸಗೌಡ ಹಾಗೂ ಗುಬ್ಬಿ ಶ್ರೀನಿವಾಸ ಗೆ ಸನ್ಮಾನ್ಯ ಎಂದು ತಿಪ್ಪೇಸ್ವಾಮಿ ಸಂಬೋಧಿಸಿದ್ದಾರೆ.
ತಿಪ್ಪೇಸ್ವಾಮಿ ಮಾತಿಗೆ ಜೆಡಿಎಸ್ ಕಾರ್ಯಕರ್ತರು ಕೆಂಡಾಮಂಡಲ.
ಅವರಿಬ್ಬರಿಗೆ ಗೌರವ ಕೊಡಬೇಡಿ, ನಮ್ಮ ಪಾಲಿಗೆ ಅವರು ಸತ್ತೋಗಿದ್ದಾರೆ. ಅವರಿಬ್ಬರಿಗೂ ಮಾನ ಮರ್ಯಾದೆ ಇಲ್ಲ, ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಿ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : – ಯೋಗದಲ್ಲೂ ರಾಜಕಾರಣ – ಪ್ರತಾಪ್ ಸಿಂಹ, ರಾಮದಾಸ್ ನಡುವೆ ಪೈಪೋಟಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!