ಕಾಳಿ ಸ್ವಾಮೀಜಿ ಕನ್ನಡ ವಿರೋಧಿಯಾಗಿ ಮಾತನಾಡಿಲ್ಲ. ನಾನು ಅವರ ಜೊತೆ ಮಾತನಾಡಿದ್ದೇನೆ, ಕಾಳಿ ಸ್ವಾಮೀಜಿ ಕೆಂಪೇಗೌಡರಿಗೆ ಹಾಗೂ ಕುವೆಂಪು ಅವರಿಗೆ ಬೈದಿದ್ದಾರೆ ಎನ್ನಲಾಗಿದೆ.
![ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಋಷಿಕುಮಾರ ಸ್ವಾಮಿಜಿಗೆ ಕಪ್ಪು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ | Miscreants throw black ink on rishi ...](https://images.tv9kannada.com/wp-content/uploads/2022/05/Kali-swamiji.jpg)
ಆದರೆ ಅವರು ಯಾವ ಸಂದರ್ಭದಲ್ಲೂ ಬೈದಿಲ್ಲ, ಈ ಸಂಬಂಧ ಏನಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದನ್ನೂ ಓದಿ : – ಆಟೋ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ – ಸ್ಥಳದಲ್ಲೇ ಬಾಲಕಿ ಸಾವು
![](https://rajnewskannada.in/wp-content/uploads/2022/05/ಪರೊಮೊದ.png)
ಧಾರವಾಡದಲ್ಲಿ ಮಾತನಾಡಿದ ಅವರು, ಕಾಳಿ ಸ್ವಾಮೀಜಿಗೆ ಮಸಿ ಬಳೆದು ಅವರ ಮೇಲೆ ದಾಳಿ ಮಾಡಿದವರ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಸನ್ಯಾಸಿಗಳ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
![Ink thrown on Kali Mutt rishikumara swamiji in bengaluru abc mrq | Kali Swamy: ಪೂಜೆ ಮುಗಿಸಿ ಹಿಂದಿರುಗ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ: ನಾನು ನಿಮ್ಮನ್ನ ತಲುಪಿದ್ದೇನೆ ಅಂದ್ರು ...](https://images.news18.com/kannada/uploads/2022/05/Untitled-design-8-1-16524242184x3.jpg)
ಕಾಳಿ ಸ್ವಾಮೀಜಿ ಏನಾದರೂ ತಪ್ಪು ಮಾಡಿದ್ದರೆ ಕೇಸ್ ಹಾಕಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಖಾವಿಧಾರಿಗಳಿಗೆ ಮಸಿ ಬಳೆಯುವುದು ಸರಿಯಲ್ಲ. ಇದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಸ್ವಾಮೀಜಿ ಮೇಲೆ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ರು .
ಇದನ್ನೂ ಓದಿ : – ಪೊಲೀಸರಿಗೆ ಹೆದರಿ ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಚಿಂತಾಜನಕ