ಕಾಂಗ್ರೆಸ್ ನಿಂದ ಹೊರ ಬಂದ ಗುಜರಾತ್ ನ ಯುವ ಹೋರಾಟಗಾರ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದು ಖಚಿತವಾಗಿದೆ.
![](https://rajnewskannada.in/wp-content/uploads/2022/05/image-89-1024x576.png)
ಗುಜರಾತ್ ರಾಜ್ಯದ ಬಿಜೆಪಿ ವಕ್ತಾರ ಯಗ್ನೇಶ್ ದಾವೆ ಅವರು ಈ ಕುರಿತು ಮಾಹಿತಿ ನೀಡಿದ್ದು, ಜೂನ್. 2 ರಂದು ಹಾರ್ದಿಕ್ ಪಟೇಲ್ ಗುಜರಾತ್ ರಾಜ್ಯದ ಬಿಜೆಪಿ ಅಧ್ಯಕ್ಷ ಸಿ ಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆಂದು ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ : – ರಾಜ್ಯಸಭೆಗೆ ಬಿಜೆಪಿಯಿಂದ ಮೂವರು ಸದಸ್ಯರನ್ನ ಕಳಿಸ್ತೇವೆ – ಯಡಿಯೂರಪ್ಪ ಭರವಸೆ
![](https://rajnewskannada.in/wp-content/uploads/2022/05/image-90.png)
ಕಾಂಗ್ರೆಸ್ ಮತ್ತು ಪಕ್ಷದ ನಾಯಕರಿಗೆ ಭಗವಾನ್ ಶ್ರೀರಾಮನ ಮೇಲೆ ಯಾಕೆ ಇಷ್ಟೊಂದು ದ್ವೇಷ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದರು.
2019ರಲ್ಲಿ ಕಾಂಗ್ರೆಸ್ ನಲ್ಲಿ ರಾಜಕೀಯ ವೃತ್ತಿ ಜೀವನ ಪ್ರಾರಂಭಿಸಿದ 28 ವರ್ಷದ ಗುಜರಾತ್ ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ನೀಡುವ ಮೂಲಕ ಪಕ್ಷ ತೊರೆದಿದ್ದರು.
ಇದನ್ನೂ ಓದಿ : – ಸಿದ್ದರಾಮಯ್ಯ ಅಲ್ಲ ನಿದ್ದೆರಾಮಯ್ಯ- ಸಚಿವ ಅಶ್ವಥ್ ನಾರಾಯಣ್ ಟಾಂಗ್