ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟದ ಹಿಂದೆ ಸರ್ಕಾರದ ಕೈವಾಡ: ರಾಮಾಲಿಂಗಾ ರೆಡ್ಡಿ

ಕೋಲಾರ: ರೆಮಿಡಿಸಿವರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದರ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಚಿತ ಆ್ಯಂಬುಲೆನ್ಸ್​​ಗಳ ವಿತರಣೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ರೆಮಿಡಿಸಿವರ್ ಬ್ಲಾಕ್ ಮಾರ್ಕೆಟ್ ನಲ್ಲಿ ಮಾರಾಟವಾಗುತ್ತಿದೆ ಎಂದರು

ಅಲ್ಲದೆ ಸರ್ಕಾರವೇ ನೇರವಾಗಿ ಕಂಪನಿಗಳಿಂದ ರೆಮಿಡಿಸಿವರ್ ಕೊಂಡುಕೊಳ್ಳುತ್ತಿದೆ. ಇದರಲ್ಲಿ ಮಧ್ಯವರ್ತಿಗಳು ಹಾಗೂ ಡೀಲರ್ಸ್ ಗಳು ಯಾರೂ ಇಲ್ಲ. ಆದರೂ ಬ್ಲಾಕ್ ಮಾರ್ಕೆಟ್ ನಲ್ಲಿ ರೆಮಿಡಿಸಿವರ್ ದುಬಾರಿ ಬೆಲೆಗೆ ಸಿಗುತ್ತಿರುವುದು ಹೇಗೆ ಎಂದು ಪ್ರಶ್ನಿಸಿದರು. ಅಲ್ಲದೆ ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಕಾರಣ ಎಂದರು.

ಇನ್ನು ಕೊರೊನಾ ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪ್ರಾರಂಭದಲ್ಲಿಯೇ ಮುಂಜಾಗೃತ ಕ್ರಮವಾಗಿ, ಐಸಿಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಮಾಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಇದ್ಯಾವುದೂ ಮಾಡದೆ, ಕೊರೊನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

ಸಚಿವ ಸುಧಾಕರ್ ಅವರು ಚಿಕ್ಕಬಳ್ಳಾಪುರಕ್ಕೆ ಮಾತ್ರ ಆರೋಗ್ಯ ಮಂತ್ರಿಗಳಾಗಿದ್ದಾರೆ. ರಾಜ್ಯದ ಇತರೆ ಜಿಲ್ಲೆಗಳ ಕಡೆಯೂ ಗಮನ ಕೊಡಬೇಕು. ಇನ್ನು ಸರ್ಕಾರಗಳು ನೀಡುತ್ತಿರುವ ಕೊರೊನಾ ಸಾವಿನ ವರದಿಗಳಿಗಿಂದ, ಮೂರುಪಟ್ಟು ಹೆಚ್ಚಿನ ಸಾವುಗಳು, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಮನೆಯಲ್ಲಿಯೇ ಆಗುತ್ತಿವೆ. ಆದರೆ ಸರ್ಕಾರ ಸೊಂಕಿತರ ಸಾವಿನ ವರದಿಗಳು ಸರಿಯಾಗಿ ನೀಡುತ್ತಿಲ್ಲ ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!