ಬೆಳಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಗೆದ್ದಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತು ಗೆದ್ದಿದೆ ಎಂದು ಪರಾಜಿತ ಅಭ್ಯರ್ಥಿ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇಂದು ಬೆಳಗಾವಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಗೆದ್ದಿದ್ದಾರೆ ಎಂದು ಚುನಾವಣಾ ಆಯೋಗ ಸರ್ಟಿಫಿಕೇಟ್ ನೀಡಿದೆ. ಆದರೆ, ರಾಜ್ಯದ ಜನರು ಕಾಂಗ್ರೆಸ್ ಗೆದ್ದಿದೆ ಎಂದು ಸರ್ಟಿಫಿಕೇಟ್ ನೀಡಿದ್ದಾರೆ ಎಂದು ನಮಗೆ ಮತ ನೀಡಿದ ಮತದಾರರಿಗೆ ಧನ್ಯವಾದಗಳು ಎಂದರು.

ಅಲ್ಲದೆ ಚುನಾವಣೆ ಸೋತಿದ್ದೇವೆ. ಆದರೆ ನಮ್ಮ ಪಕ್ಷಕ್ಕೆ ತುಂಬಾ ಲಾಭ ಆಗಿದೆ.‌ ರಾಜ್ಯದಲ್ಲಿ ಮುಂಬರುವ ಚುನಾವಣೆಗಳಲ್ಲಿ ಈ ಚುನಾವಣೆ ಮಾದರಿ ಆಗಲಿದೆ. ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಮತ್ತು ಮಾಜಿ ಶಾಸಕರು ನಮ್ಮ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಸ್ವಯಂ ಪ್ರೇರಣೆಯಿಂದ ಜನರು ನಮ್ಮ ಪರ ಪ್ರಚಾರ ಮಾಡಿದ್ದಾರೆ. ಕ್ಷೇತ್ರದಲ್ಲಿ ನಮಗೆ ಬರಬೇಕಾದ ಮತಗಳು ಬಂದಿದೆ. ಆದರೆ ಗೋಕಾಕ್ ಮತ್ತು ಬೆಳಗಾವಿ ದಕ್ಷಿಣದಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ ಎಂದರು.

ಕೋವಿಡ್ ವಿಚಾರವಾಗಿ ಮಾತನಾಡಿದ ಅವರು, ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ ಚಾಮರಾಜ ನಗರದದಲ್ಲಿ ಆಕ್ಸಿಜನ್ ಸಿಗೆದ 24 ಜನ ತಿರುಕೊಂಡಿದ್ದು. ಚಾಮರಾಜನಗರದಲ್ಲಿ ನಡೆದಿರುವ ಘಟನೆಗೆ ರಾಜ್ಯ ಸರ್ಕಾರವೆ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!