ಸರ್ಕಾರದ ವಿರುದ್ದ ಸಾರಿಗೆ ನೌಕರರ ವಿನೂತನ ಪ್ರತಿಭಟನೆ

ಬೆಂಗಳೂರು: ಸಾರಿಗೆ ನೌಕರರು ತಮ್ಮ 9 ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ವಿಭಿನ್ನ ಧರಣಿ ನಡೆಸುತ್ತಿದ್ದಾರೆ. ಮೊದಲ ದಿನದಂದು ನೌಕರರು ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಚಳುವಳಿ ಆರಂಭಿಸಿದ್ದಾರೆ.

ಇಂದು ನಾಲ್ಕು ನಿಗಮದ ಡಿಪೋಗಳಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನೌಕರರು ಬೆಳಗ್ಗೆ 10 ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಿದ್ದಾರೆ. ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚಳುವಳಿ ಆರಂಭವಾಗಿದ್ದು, ಇಂದಿನಿಂದ ನಡೆಯುವ 7 ದಿನಗಳ ಹೋರಾಟದ ರೂಪುರೇಷೆ ಹೀಗಿದೆ.

ಏಪ್ರಿಲ್ 2 : ಬೆಂಗಳೂರಿನ ಸರ್ಕಲ್ ಗಳಲ್ಲಿ ಕುಟುಂಬದವರೊಂದಿಗೆ ಸೇರಿಕೊಂಡು ಬಜ್ಜಿ ಬೊಂಡಾ ಮಾರಾಟ

ಏಪ್ರಿಲ್ ‌3 : ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ನಗರಗಳ ಸರ್ಕಲ್ ಗಳಲ್ಲಿ ಮಾನವ ಸರಪಳಿ ಮಾಡಿ ಭಿತ್ತಿಪತ್ರ ಪ್ರದರ್ಶನ

ಏಪ್ರಿಲ್ 4 : ಸಾರ್ವಜನಿಕರಿಗೆ ಕರಪತ್ರ ಹಂಚುವುದು

ಏಪ್ರಿಲ್ 5 : ಧರಣಿ ಸತ್ಯಾಗ್ರಹ

ಏಪ್ರಿಲ್ 6 : ಸಾಮೂಹಿಕ ಉಪವಾಸ ಸತ್ಯಾಗ್ರಹ

ಏಪ್ರಿಲ್ 7 : ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತ

ಸಾರಿಗೆ ನೌಕರರ  ಬೇಡಿಕೆಗಳೇನು?:

ನಿಗದಿತ ಸಮಯಕ್ಕೆ ಮಾಸಿಕ ವೇತನ ಪಾವತಿಸಬೇಕು ಮತ್ತು ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸಬೇಕು. ಷರತ್ತುಗಳಿಲ್ಲದೆ ಕಡ್ಡಾಯವಾಗಿ ವಾರದ ರಜೆ ನೀಡಬೇಕು. ಕಡಿತ ಮಾಡಿದ ರಜೆಗಳನ್ನು ವಾಪಾಸ್ ಕೊಡಬೇಕು. ಪೂರ್ಣ ಪ್ರಮಾಣದಲ್ಲಿ 4 ಪಾಳಿಗಳಲ್ಲಿ ಬಸ್ ಕಾರ್ಯಾಚರಣೆ ಮಾಡಬೇಕು. ಮಹಿಳಾ ಕಾರ್ಮಿಕರಿಗೆ ಮೊದಲ ಮತ್ತು ಸಾಮಾನ್ಯ ಪಾಳಿಯ ಕೆಲಸಕ್ಕೆ ಆದ್ಯತೆ ನೀಡಬೇಕು. ಗುತ್ತಿಗೆ ಆಧಾರದಡಿ ಎಲೆಕ್ಟ್ರಿಕ್ ಬಸ್​ ಪಡೆಯುವ ಯೋಜನೆಯನ್ನು ಕೈಬಿಡಬೇಕು ಎಂಬಿತ್ಯಾದಿ 9 ಪ್ರಮುಖ ಬೇಡಿಕೆಗಳನ್ನು ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!