ರಾಜ್ಯದ ಪರಿಸ್ಥಿತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಣೆ: ಸಿಎಂ ಯಡಿಯೂರಪ್ಪ


ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ 19 ಎರಡನೇ ಅಲೆ ನಿರೀಕ್ಷೆಗೂ ವ್ಯಾಪಿಸುತ್ತಿದೆ. ಈಗಾಗಲೇ ಘೋಷಣೆಯಾಗಿರುವಂತೆ ಜೂನ್ 7ರವರೆಗೆ ಲಾಕ್‌ ಡೌನ್‌ ಇರಲಿದ್ದು ಅಲ್ಲಿಯವರೆಗಿನ ಸ್ಥಿತಿಗತಿಗಳನ್ನು ಅವಲೋಕಿಸಿ ಲಾಕ್‌ ಡೌನ್‌ ವಿಸ್ತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಸಿಟೀವ್‌ ಪ್ರಮಾಣ ಶೇ.10ಕ್ಕಿಂತ ಕುಸಿಯುವಂತೆ ಮಾಡಲು ಸೂಚಿಸಲಾಯಿತು. ಮರಣ ಪ್ರಮಾಣ ಶೇ.1.7 ಇದೆ, ಮರಣದ ಸಂಖ್ಯೆ ಕಡಿಮೆಯಾಗಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ.60 ಪ್ರಕರಣಗಳು ವರದಿಯಾಗುತ್ತಿವೆ. ಈ ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸಬೇಕಾಗಿದೆ ಎಂದರು.

ಕೆಲ ದಿನಗಳಿಂದ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್‌ ಬದಲು ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವಂತೆ ಮನವೊಲಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್‌ ನಿಯಂತ್ರಣದಲ್ಲಿ ಶಾಸಕರು ಮತ್ತು ಸಂಸದರು ತಮ್ಮ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಚಿಕಿತ್ಸಾ ಸೌಲಭ್ಯಗಳು, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ತಕ್ಕಂತೆ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲೂ ಸಮಸ್ಯೆ ಉದ್ಭವಿಸದಂತೆ ಸಂಪನ್ಮೂಲಗಳ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!