ಚಾಮರಾಜನಗರ ( chamarajnagara ) ವಿಧಾನಸಭಾ ಕ್ಷೇತ್ರಕ್ಕೆ ಕ್ರೆಡಿಲ್ ಅಧ್ಯಕ್ಷ ಎಂ.ರುದ್ರೇಶ್ ( rudresh ) ಇಂದು ಭೇಟಿ ನೀಡಿದ್ದಾರೆ. ಚಾಮರಾಜನಗರದಿಂದ ಅಖಾಡಕ್ಕಿಳಿಯಲು ಎಂ.ರುದ್ರೇಶ್ ಸಜ್ಜಾಗಿದ್ದಾರೆ. ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಅಖಾಡಕ್ಕಿಳಿಯಲಿದ್ದಾರೆ.
ಚಾಮರಾಜನಗರ ತಾಲೂಕಿನ ಮರಿಯಾಲದ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ( murugarajendra swamiji ) ಯವರ ಆಶೀರ್ವಾದ ಪಡೆದುಕೊಂಡು ನಂತರ ಮಾತನಾಡಿದ ಅವರು, ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಲಾಯಿತು.
ನಾಡು ಕಂಡ ಶ್ರೇಷ್ಠ ರಾಜಕಾರಣಿ, ರಾಜಕೀಯ ಮುತ್ಸದ್ದಿ ದಿವಂಗತ ಎಂ.ವಿ.ರಾಜಶೇಖರ್ ಮೂರ್ತಿ ಯವರ ಸಮಾಧಿಗೆ ಗೌರವದಿಂದ ನಮಿಸಿ ಅವರ ಆಶೀರ್ವಾದ ಪಡೆದಿದ್ದೇನೆ. ಶ್ರೀ ಮಠದ ಹಾಗೂ ಗ್ರಾಮಸ್ಥರ ಸೇವೆ, ಶಿಸ್ತು ಮತ್ತು ಸರಳ ಸಜ್ಜನಿಕೆಗಳು ಇತರರಿಗೆ ಮಾದರಿಯಾಗಿವೆ ಎಂದರು. ಇದನ್ನು ಓದಿ :- ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಕಾರಜೋಳ ವಾಗ್ದಾಳಿ
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಭೇಟಿ ಭಕ್ತಿ ಭಂಡಾರಿ ಬಸವಣ್ಣನವರ ಪ್ರತಿಮೆಗೆ ಶ್ರದ್ಧಾ ಭಕ್ತಿಯಿಂದ ನಮಿಸಿ, ಗ್ರಾಮದ ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಿದರು. ಗ್ರಾಮದ ಜನತೆ ತೋರಿದ ಪ್ರೀತಿ ಹಾಗೂ ವಿಶ್ವಾಸಕ್ಕೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಹೇಳಿದ್ರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಲಿಟ್ಟ ಮೊದಲನೇ ದಿನವೇ, ಅಲ್ಲಿನ ಜನತೆ ನನ್ನ ಮೇಲೆ ತೋರಿಸುತ್ತಿರುವ ಬೆಂಬಲ ಕಂಡು ನಾನು ದಿಗ್ಭ್ರಾಂತನಾಗಿದ್ದೇನೆ. ನಿಜವಾದ ಜನನಾಯಕನಿಗಷ್ಟೇ ಇಂತಹ ಬೆಂಬಲ ದೊರೆಯುವುದು ಎಂದು ಹೇಳಿದ್ರು.
ಇದನ್ನು ಓದಿ :- ಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ – ಬೆಲ್ಲದ್ ಪರಿಶೀಲನೆ