ಬಿಜೆಪಿ ( bjp ) ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( nithish kumar ) ಮತ್ತೊಮ್ಮೆ ಮಹಾ ಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ ನಡುವಿನ ಮೊದಲ ಮೈತ್ರಿ ಮುರಿದು ಬಿದ್ದ ಸ್ಥಳದಲ್ಲಿ ಮಹಾಘಟಬಂಧನ್ 2.0 ಪ್ರಾರಂಭವಾಗಲಿದೆ ಎಂದು ಆರ್ ಜೆ ಡಿ ಹೇಳಿದೆ.
ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಮತ್ತು ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಅವರು ಸಂಪುಟದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ ತಿಂಗಳಲ್ಲಿ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರ ಮನೆಗೆ ಇಫ್ತಾರ್ ಕೂಟಕ್ಕಾಗಿ ಸೇರಿದಾಗಲೇ ಬಿಜೆಪಿ ಜೊತೆಗಿನ ಮೈತ್ರಿಗೆ ಇತೀ ಶ್ರೀ ಹಾಡಲು ನಿರ್ಧರಿಸಲಾಗಿತ್ತು. ಸಂಜೆ 4 ಗಂಟೆಗೆ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಹೊಸ ಸರ್ಕಾರ ರಚನೆಯಲ್ಲಿ ಯಾರಿರಲಿದ್ದಾರೆ ಎಂಬುದು ಬಹಿರಂಗವಾಗಲಿದೆ.
ಇದನ್ನೂ ಓದಿ : – BREAKING – ಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತೆರೆ- ಬಿಜೆಪಿಯೊಂದಿಗಿನ ಮೈತ್ರಿಗೆ ತಿಲಾಂಜಲಿ ಹಾಡಿದ ಜೆಡಿಯು