ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಎಲ್ಲರೂ ಒಗ್ಗೂಡುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಮುಖ 15 ಪ್ರತಿಪಕ್ಷಗಳಿಗೆ ಪತ್ರ ಬರೆದಿದ್ದಾರೆ.
ಬುಧವಾರ 3 ಪುಟದ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಹಾಗೂ ಆಡಳಿತದಲ್ಲಿರುವ ಬಿಜೆಪಿ ಸರಕಾರ ಸತತವಾಗಿ ಧಮನಕಾರಿ ನೀತಿ ಅನುಸರಿಸುತ್ತಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಲ್ಲದೇ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್, ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮುಂತಾದವರಿಗೆ ಪತ್ರ ಬರೆದಿದ್ದಾರೆ.