ಹಾಲಿ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜ್ ಅವರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಲಕ್ಷ್ಮಿಪುರ ಬಡಾವಣೆಯಲ್ಲಿ ನಡೆದಿದೆ.
![](https://rajnewskannada.in/wp-content/uploads/2022/06/Capture1.png)
ಪ್ರಶಾಂತ್ ನಾಗರಾಜ್ (42) ಅವರು ಲಕ್ಷ್ಮಿ ಪುರ ಬಡಾವಣೆಯ ಜವೇನಹಳ್ಳಿ ಮಠದ ಬಳಿ ದ್ವಿಚಕ್ರ ವಾಹನದಲ್ಲಿ ಮನೆಕಡೆಗೆ ಹೋಗುವಾಗ ಹಿಂದಿನಿಂದ ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಇದನ್ನೂ ಓದಿ : – ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು- ಕಟೀಲ್ ಗೆ ಡಿಕೆಶಿ ಪ್ರಶ್ನೆ
![](https://rajnewskannada.in/wp-content/uploads/2022/06/Capture-1.png)
ಸ್ಥಳಕ್ಕೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಎಸ್ಪಿ ನಂದಿನಿ, ಪೆನ್ಷನ್ ಮೊಹಲ್ಲಾ ಪೊಲೀಸರು ಸೇರಿದಂತೆ ಶ್ವಾನದಳ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ : – ಬೇಟೆಯಾಡೋ ಹುಲಿಯನ್ನ ಬೋನ್ ನಲ್ಲಿ ಕೂಡಿ ಹಾಕಿದ್ರೂ ಅದು ತನ್ನ ಪ್ರವೃತ್ತಿ ಮರೆಯಲ್ಲ – ಅಪ್ಪನ ನಿರ್ಲಕ್ಷಿಸಿದವರಿಗೆ ವಿಜಯೇಂದ್ರ ತಿರುಗೇಟು