ಬೆಂಗಳೂರು : ರಾಜ್ಯದಲ್ಲಿ ಜಾರಿ ಇರುವ ಲಾಕ್ ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಬಗ್ಗೆ ನಾಳೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಸಿಎಂ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ. ಇನ್ನೂ ಸುದ್ದಿಗೋಷ್ಠಿಗೂ ಮುನ್ನ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ, ನಾಳೆ ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ.
ಈಗ ಘೋಷಿಸಿರುವ ಲಾಕ್ಡೌನ್ ಇದೇ ತಿಂಗಳ 24ಕ್ಕೆ ಮುಕ್ತಾಯವಾಗಲಿದೆ. ಕೊರೊನಾ ನಿಯಂತ್ರಣಕ್ಕೆ ತರಬೇಕು ಅಂದ್ರೆ ರಾಜ್ಯ ಸರ್ಕಾರಕ್ಕೆ ಲಾಕ್ ಡೌನ್ ವಿಸ್ತರಣೆ ಅನಿವಾರ್ಯವಾಗಿದ್ದು, ನಾಳೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಈಗಾಗಲೇ ಸರ್ಕಾರ ಸಾಲು ಸಾಲು ಸಭೆಗಳನ್ನ ನಡೆಸಿ ಮೇ 24 ರಿಂದ ಮೇ 31 ರವರೆಗೆ ಲಾಕ್ ಡೌನ್ ವಿಸ್ತರಣೆಗೆ ಸಕಲ ತಯಾರಿ ನಡೆಸಿದೆ.
ಇನ್ನೂ ಲಾಕ್ ಡೌನ್ ವಿಸ್ತರಣೆ ಜೊತೆಗೆ ಪ್ಯಾಕೇಜ್ ಘೋಷಣೆಗೆ ಬಗ್ಗೆ ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಬಿ ಎಸ್ ಯಡುಯೂರಪ್ಪನವರು ಬಡವರಿಗೆ, ಅಸಂಘಟಿತ ಕಾರ್ಮಿಕರಿಗೆ ನೆರವಾಗುವಂತೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.