ಮಾನಸಿಕ ಖಿನ್ನತೆಗೊಳಗಾಗಿ ಎಂಬಿಬಿಎಸ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ವಿಮ್ಸ್ ಹಾಸ್ಟೆಲ್ ನಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/WhatsApp-Image-2022-05-07-at-10.22.44-AM1-768x1024.jpeg)
ಮೃತ ವಿದ್ಯಾರ್ಥಿಯನ್ನು ಶ್ರೇಯಸ್ ಜೋಶಿ (25) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಶ್ರೇಯಸ್ ಎಂಬಿಬಿಎಸ್ ಫೈನಲ್ ಇಯರ್ ಪಾಸಾಗಿದ್ದ ಬೈ ಪೋಲಾರ್ ಡಿಸಾರ್ಡರ್ ಎಂಬ ಕಾಯಿಲೆಯಿಂದ ಆತ್ಮಹತ್ಯೆಗೆ ಶ್ರೇಯಸ್ ಶರಣಾದನು ಎನ್ನಲಾಗಿದೆ. ಶುಕ್ರವಾರ ಸಂಜೆ ನೇಣು ಬಿಗಿದುಕೊಂಡು ಶ್ರೇಯಸ್ ಜೋಶಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಕೂಡಲೇ ಶ್ರೇಯಸ್ನನ್ನು ಅವನ ಸ್ನೇಹಿತರು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ 6.30ಕ್ಕೆ ಶ್ರೇಯಸ್ ಆಸ್ಪತ್ರೆಯಲ್ಲೆ ಮೃತಪಟ್ಟಿದ್ದಾನೆ. ಇದನ್ನೂಓದಿ :- ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಬಿಎಂಟಿಸಿ ಡ್ರೈವರ್