ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಜರುಗಲಿದ್ದು ಈ ಹಿನ್ನೆಲೆಯಲ್ಲಿ ಸಚಿವ ಅಶ್ವಥ್ ನಾರಾಯಣ್ ಇಂದು ಅವಿಮುಕ್ತೇಶ್ವರ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ಬೆಂಬಲಿಗರೊಂದಿಗೆ ಪೂಜೆ ಸಲ್ಲಿಸಿದರು.
![](https://rajnewskannada.in/wp-content/uploads/2022/05/WhatsApp-Image-2022-05-15-at-4.36.22-PM-1024x576.jpeg)
ಈ ವೇಳೆ ಜೆಡಿಎಸ್ ನ ಜನತಾ ಜಲಧಾರೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರ ಪಕ್ಷ ಸಂಘಟನೆ ಮಾಡ್ತಾ ಇರ್ತಾರೆ.ಬಿಜೆಪಿ ಪಕ್ಷಕ್ಕೆ ಜನರ ಆಶೀರ್ವಾದ ಇದೆ ಜನ ಬಿಜೆಪಿ ಪಕ್ಷದ ಜೊತೆ ಇದ್ದಾರೆ. ಮುಂದಿನ ದಿನಗಳಲ್ಲಿ ಮಾತನಾಡೋಣ ಬಹಳಷ್ಟು ಅವಕಾಶ ಸಿಗುತ್ತೆ ಅಂತಾ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ :- ಟಿ20 ಕ್ರಿಕೆಟ್ ನ ಐಸಿಸಿ ರ್ಯಾಂಕಿಂಗ್ ನಲ್ಲಿ ಭಾರತಕ್ಕೆ ಅಗ್ರಸ್ಥಾನ