ಮಂಡ್ಯ: ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಆಗದಂತೆ ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಕೋವಿಡ್ -19 ತಡೆಗಟ್ಟುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ -19 ಮಹಾಮಾರಿಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಎಲ್ಲರೂ ಆರೋಗ್ಯವಾಗಿರಲು ಗುಣಮಟ್ಟದ ಚಿಕಿತ್ಸೆಯನ್ನು ಕೊಡಬೇಕೆಂದು ಎಂದರು.
ಎಲ್ಲಾ ಅಧಿಕಾರಿಗಳು ಜಿಲ್ಲೆಯ ಕೇಂದ್ರ ಸ್ಥಾನ ಬಿಟ್ಟು ಹೋಗದೆ ಜಿಲ್ಲೆಯಲ್ಲಿ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.
ನಾನೂ ನಿಮ್ಮೊಂದಿಗೆ 24 ಗಂಟೆಗಳ ಕಾಲ ಇದ್ದು ಏನೇ ಸಮಸ್ಯೆ ಬಂದರೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣ ಸಮಸ್ಯೆಗಳನ್ನು ಬಗೆಹರಿಸಲು ನಾನು ಬದ್ಧ ಎಂದರು.