ಬೆಂಗಳೂರು : ಇಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು(President Draupadi Murmu) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.20ಕ್ಕೆ ಆಗಮಿಸಲಿದ್ದಾರೆ. ಬಳಿಕ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ 4 ಗಂಟೆ ಹೊತ್ತಿಗೆ ಐಐಎಂ ಸಂಸ್ಥಾಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಈ ನಿಟ್ಟಿನಲ್ಲಿ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ. ಬಳಿಕ ಇಂದು ಸಂಜೆಯೇ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆರಾಷ್ಟ್ರಪತಿ ದ್ರೌಪದಿ ಮುರ್ಮು ತೆರಳುವ ಸಾಧ್ಯತೆಯಿದೆ