ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ( d.k shivkumar ) ಮನವಿಯನ್ನು ಮಾಡಿದ್ದರು. ಆ ಮನವಿ ಮೇರೆಗೆ ದೆಹಲಿ ಹೈ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.7ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಡಿಕೆ ಶಿವಕುಮಾರ್ ಮಾಡಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ ( ED ) ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅವರು ಇಡಿ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ : – Blue Tick ಪಡೆಯಲು ತಿಂಗಳಿಗೆ 8 ಡಾಲರ್ ಪಾವತಿಸಿ – ಎಲಾನ್ ಮಸ್ಕ್
ಕಾಂಗ್ರೆಸ್ ( CONGRESS ) ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಾರ್ಯಾಚರಣೆಗಳ ಬಗ್ಗೆ ನಡೆಯುತ್ತಿರುವ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಡಿಕೆ ಶಿವಕುಮಾರ್ ಮಾತ್ರವಲ್ಲದೆ ಅವರ ಸಹೋದರ ಹಾಗೂ ಸಂಸದ ಡಿ.ಕೆ ಸುರೇಶ್ ಗೂ ಇಡಿ ಸಮನ್ಸ್ ನೀಡಿತ್ತು.
ಇದನ್ನೂ ಓದಿ : – ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ- ಕಾರಿನಲ್ಲಿ ಹೋಗ್ತಿರೋ CCTV ದೃಶ್ಯ ಲಭ್ಯ