ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಈಗ ಟೋಪಿ ವಿವಾದ ಆರಂಭವಾಗಿದೆ. ಬಿಎಂಟಿಸಿ ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಬಿಎಂಟಿಸಿ ಯ ಕೆಲವು ಹಿಂದೂ ಸಿಬ್ಬಂದಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ಸ್ವಾಮ್ಯದ ಬಿಎಂಟಿಸಿಯ ಕೆಲವು ಹಿಂದೂ ನೌಕರರು, ಮುಸ್ಲಿಂ ಚಾಲಕರು, ಕಂಡಕ್ಟರ್ ಗಳು ಮತ್ತು ಇತರರು ಸ್ಕಲ್ ಕ್ಯಾಪ್ ಧರಿಸಿರುವುದನ್ನು ವಿರೋಧಿಸಿ ಈಗ ಕೇಸರಿ ಶಾಲು ಧರಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಮುನ್ನವೇ ಟೋಪಿ ವಿವಾದ ಸೃಷ್ಟಿಯಾಗಿದ್ದು, ಹಿಂದೂ ನೌಕರರು ತಮ್ಮ ಮುಸ್ಲಿಂ ಸಹೋದ್ಯೋಗಿಗಳು ಸ್ಕಲ್ ಕ್ಯಾಪ್ ಧರಿಸುವುದನ್ನು ವಿರೋಧಿಸಿದ್ದಾರೆ. ಇದು ಬಿಎಂಟಿಸಿ ನಿಗದಿಪಡಿಸಿದ ಸಮವಸ್ತ್ರದ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ. ಆದಾಗ್ಯೂ, ಕೆಲಸದ ಸಮಯದಲ್ಲಿ ತಲೆಗೆ ಧರಿಸಿರುವ ಟೋಪಿ ತೆಗೆಯಲು ಮುಸ್ಲಿಂ ಉದ್ಯೋಗಿಗಳು ಸಂಪೂರ್ಣ ನಿರಾಕರಿಸಿದ್ದಾರೆ. ಇದು ಹಿಂದೂ ನೌಕರರು ಪ್ರತೀಕಾರವಾಗಿ ಕೇಸರಿ ಶಾಲು ಧರಿಸಲು ಪ್ರೇರೇಪಿಸಿದೆ. ಇದನ್ನೂ ಓದಿ : – ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಬೆಂಗಳೂರು ಗ್ರಾಮಾಂತರ ಪೊಲೀಸರು – ಗೃಹ ಸಚಿವರಿಂದ ಅಭಿನಂದನೆ
ಬಿಎಂಟಿಸಿ ಯಲ್ಲಿ ಕಟ್ಟುನಿಟ್ಟಾದ ಏಕರೂಪದ ನಿಯಮಗಳನ್ನು ಜಾರಿಗೆ ತರಲು ಮತ್ತು ಟೋಪಿ ಧರಿಸುವುದನ್ನು ತಪ್ಪಿಸುವ ಉದ್ದೇಶದಿಂದ ಹಿಂದೂ ಸಿಬ್ಬಂದಿ “ಕೇಸರಿ ಕಾರ್ಮಿಕರ ಸಂಘ” ಎಂಬ ಹೆಸರಿನಲ್ಲಿ ಸಂಘವನ್ನು ಕಟ್ಟಿಕೊಂಡಿದ್ದಾರೆ. ಈ ಸಂಘದ ಅಡಿಯಲ್ಲಿ ಸುಮಾರು 1,500 ನೌಕರರು ನೋಂದಾಯಿಸಿಕೊಂಡಿದ್ದಾರೆ ಮತ್ತು ಅವರು ಕರ್ತವ್ಯದ ಸಮಯದಲ್ಲಿ ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ನಿಷೇಧಿಸುವವರೆಗೆ ಕೇಸರಿ ಶಾಲು ಧರಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : – ಕಾಂಗ್ರೆಸ್ ಬೆಂಬಲಿಸಿದ ಶಾಸಕರಿಗೆ ಧನ್ಯವಾದ – ಡಿ ಕೆ ಶಿವಕುಮಾರ್