ನನ್ನ ಬಂಧನಕ್ಕೆ ಪ್ರಧಾನಿ ಕಚೇರಿಯಿಂದಲೇ ಷಡ್ಯಂತ್ರ – ಜಿಗ್ನೇಶ್ ಮೇವಾನಿ

ಪ್ರಧಾನಿ ಕಚೇರಿಯಿಂದಲೇ ನನ್ನ ಬಂಧನಕ್ಕೆ ಷಡ್ಯಂತ್ರ ರೂಪಿಸಲಾಗಿತ್ತು ಎಂದು ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಗಂಭೀರ ಆರೋಪ ಮಾಡಿದ್ದಾರೆ.

Jignesh mevani: Latest News, Videos and Photos of Jignesh mevani | Times of  India

ಅಸ್ಸಾಂನಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಬಿಡುಗಡೆಯಾದ ನಂತರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಗ್ನೇಶ್ ಮೇವಾನಿ, ನನ್ನ ಬಂಧನಕ್ಕೆ ಪ್ರಧಾನಿ ಕಚೇರಿಯಿಂದಲೇ ಷಡ್ಯಂತ್ರ ರೂಪಿಸಲಾಗಿದೆ.

ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು. ಅವರು ನನ್ನನ್ನು ಕರೆದೊಯ್ದಾಗ ಪ್ರಕರಣದ ವಿವರಗಳನ್ನು ನೀಡಲಿಲ್ಲ. ನಾನು ವಕೀಲ ಮತ್ತು ಶಾಸಕ. ಅವರು ನನ್ನ ವಿರುದ್ಧ ಬಳಸಲಾದ ಸೆಕ್ಷನ್‌ಗಳನ್ನು ಅವರು ನನಗೆ ಹೇಳಲಿಲ್ಲ ಮತ್ತು ನನ್ನ ಹೆತ್ತವರೊಂದಿಗೆ ಮಾತನಾಡಲು ಬಿಡಲಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲೂ ಸಹ ನನಗೆ ಅವಕಾಶ ನೀಡಲಿಲ್ಲ ಎಂದು ಮೇವಾನಿ ಆರೋಪಿಸಿದ್ದಾರೆ.

ಇದನ್ನು ಓದಿ :- ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆ ಬರುವ ಸಾಧ್ಯತೆ ಇದೆ – ಗೌರವ್‌ ಗುಪ್ತ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!