ಅನೇಕ ತಿಂಗಳುಗಳಿಂದ ಖಾಲಿ ಇದ್ದ ಕರ್ನಾಟಕ ಲೋಕಾಯುಕ್ತ (Karnataka lokhayuktha) ಹುದ್ದೆ ಕೊನೆಗೂ ಭರ್ತಿಯಾಗಿದೆ. ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ (Bheemanagowda sanganagowda patil) ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
![](https://rajnewskannada.in/wp-content/uploads/2022/06/WhatsApp-Image-2022-06-15-at-10.33.03-AM-1024x593.jpeg)
ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai) , ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) , ಗೃಹ ಸಚಿವ ಆರಗ ಜ್ಞಾನೇಂದ್ರ (Araga gnanendra) , ಸಚಿವರಾದ ವಿ. ಸೋಮಣ್ಣ(Somanna) , ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು. ಇದನ್ನೂ ಓದಿ : – ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್ ನೇಮಕ
ಮಾಜಿ ಸಿಎಂ ಸಿದ್ದರಾಮಯ್ಯ ಶುಭಾಶಯ
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಇದನ್ನೂ ಓದಿ :- ಸತತ 8ನೇ ಬಾರಿಗೆ ಪರಿಷತ್ ಪ್ರವೇಶಿಸಿದ ಬಸವರಾಜ್ ಹೊರಟ್ಟಿ