ಸಿದ್ದರಾಮಯ್ಯ ವಿರುದ್ಧ ನಳೀನ್ ಕುಮಾರ್ ಕಟೀಲ್ ತೀವ್ರ ವಾಗ್ದಾಳಿ !

ಭಿಕ್ಷಾಟನೆ ಮಾಡುವ ಸ್ಥಿತಿಗೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೋಗಿದ್ದಾರೆ ಎಂದು ಬಿಜೆಪಿ (Bjp) ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin kumar kateel) ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಚಿಂತನೆ ರಾವಣಂದು, ಮುಖ ಮಾತ್ರ ಸಿದ್ದರಾಮಯ್ಯನದು ಎಂದು ಕಿಡಿಕಾರಿದ್ದಾರೆ. ಬಳ್ಳಾರಿಯ (Ballari) ತೋರಣಗಲ್ ನಲ್ಲಿ ರಾಜ್ಯ ಎಸ್ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿ ಕೇವಲ ಮತ ಬ್ಯಾಂಕ್ ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ. ಆದ್ರೆ ಜನ ನಿಶ್ಚಯ ಮಾಡಿದ್ದಾರೆ ಸಿದ್ದರಾಮಣ್ಣನ್ನ ಓಡಿದಬೇಕು ಅಂತಾ ಲೇವಡಿ ಮಾಡಿದ್ದಾರೆ. ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಯಾವ ಕಾರಣಕ್ಕೆ ಬೇಲ್ ಮೇಲೆ ಇದ್ದಾರೆ. ಈಗ ಚಾರ್ಜ್ ಶೀಟ್ ಬೀಳ್ತಾ ಇದೆ. ಇವರೆಲ್ಲ ಏನು ಸ್ವಾತಂತ್ರ್ಯ ಹೊರಾಟ ಮಾಡಿದ್ರಾ? ಎಂದು ಪ್ರಶ್ನಿಸಿದ್ದಾರೆ. ಇವತ್ತು ಕಾಂಗ್ರೇಸ್ ಸೇರಬೇಕು ಅಂದ್ರೆ ಅವನ ಮೇಲೆ 50 ಕ್ರಿಮಿನಲ್ ಕೇಸ್ ಇರಬೇಕು. ಭ್ರಷ್ಟರ ಪಾರ್ಟಿ ಕಾಂಗ್ರೆಸ್ (Congress) , ಕ್ರಿಮಿನಲ್ ಗಳ ಪಾರ್ಟಿ ಕಾಂಗ್ರೆಸ್, ಉಗ್ರವಾದಿಗಳ ಪಾರ್ಟಿ ಕಾಂಗ್ರೆಸ್ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ : – ರಾಷ್ಟ್ರಕವಿ, ನಾಡಗೀತೆಗೆ ಅವಮಾನ – ಕುವೆಂಪು ಪ್ರತಿಷ್ಟಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ

ಅಲ್ಪ ಸಂಖ್ಯಾತರಿಗೆ ಶಾದಿ ಭಾಗ್ಯ ಕೊಟ್ಟಿದ್ದೀರಿ, ಅಲ್ಪ ಸಂಖ್ಯಾತ ಪತ್ರಕರ್ತರಿಗೆ ಲ್ಯಾಪ್ ಟಾಪ್ ಕೊಟ್ಟಿದ್ದೀರಿ. ಕೊನೆಗೆ ವೀರಶೈವ ಲಿಂಗಾಯತ ಸಮಾಜ ಹೊಡೆಯೋ ಪ್ರಯತ್ನ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದ್ರು. ಇದೇ ವೇಳೆ ನಟ ಜಗ್ಗೇಶ್ಗೆ ರಾಜ್ಯ ಸಭಾ ಟಿಕೇಟ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಜಗ್ಗೇಶ್ (Jageesh) ಹತ್ತಾರು ವರ್ಷದಿಂದ ಬಿಜೆಪಿಯಲ್ಲಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟು ಅವಕಾಶ ನೀಡಲಾಗಿದೆ ಎಂದು ಸಮರ್ಥಿಸಿದ್ರು.ಮಂಗಳೂರಿನಲ್ಲಿ ಹಿಜಾಬ್ (Mangalore hijab) ಮುನ್ನಲೆ ವಿಚಾರ ಕುರಿತಂತೆ ಮಾತನಾಡಿ ನ್ಯಾಯಾಲಯದ ತೀರ್ಪು ಎಲ್ಲರೂ ಪಾಲನೆ ಮಾಡ್ಬೇಕು. ಮತ ಧರ್ಮ ಮೀರಿದ್ದು. ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರ ಕಟ್ಟುನಿಟ್ಟಿನ ನಿಯಮ ಮಾಡಿದೆ. ಪಾಲನೆ ಮಾಡಲಿಲ್ಲ ಅಂದ್ರೆ ಕಾನೂನು ಕ್ರಮ ಆಗುತ್ತೆ ಎಂದು ಹೇಳಿದ್ರು. ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ : – ಆರ್.ಎಸ್.ಎಸ್. ಟೀಕೆ ಮಾಡದಿದ್ರೆ ಕಾಂಗ್ರೆಸ್ ನವರಿಗೆ ಉಂಡಿದ್ದು ಜೀರ್ಣ ಆಗೋದಿಲ್ಲ – ಜಗದೀಶ್ ಶೆಟ್ಟರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!