ಆಸಿಸ್ ವಿರುದ್ದ ಟೀಮ್ ಇಂಡಿಯಾದ ದಿಗ್ವಿಜಯ;ಕೇಂದ್ರ ಬಜೆಟ್ನಲ್ಲಿ ಉಲ್ಲೇಖ

ಆಸ್ಟ್ರೇಲಿಯಾದಲ್ಲಿ ಭಾರತ ಸಾಧಿಸಿದ ದಿಗ್ವಿಜಯವನ್ನ ಕ್ರಿಕೆಟ್ ಅಭಿಮಾನಿಗಳು ಎಂದು ಮರೆಯಲಾರರು. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ಎಲ್ಲರೂ ಮೆಚ್ಚುಗೆ ವ್ಯೆಕ್ತಪಡೆಸಿದ್ದಾರೆ. ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿರುವುದು ನಿಜಕ್ಕೂ ಸಂತಸದ ವಿಷಯವಾಗಿದೆ.ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ವೇಳೆ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದ್ದಾರೆ.
ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ” ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು.
“ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ” ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ತನ್ನ ಎತ್ತಿಹಿಡಿಯುವಲ್ಲಿ ಯಶಸ್ವಿಯಾಯಿತು.