ರಾಜ್ಯಸಭೆಗೆ ಯುಪಿಯಿಂದ ನಿರ್ಮಲಾ ಸೀತಾರಾಮನ್ ಸ್ಫರ್ಧೆ – ರಾಜ್ಯದಿಂದ ತೇಜಸ್ವಿನಿ ಅನಂತ್ ಕುಮಾರ್ ಗೆ ಸಿಗುತ್ತಾ ಟಿಕೆಟ್ ?

ಮೂರೂ ರಾಜಕೀಯ ಪಕ್ಷಗಳಲ್ಲಿ ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಶುರುವಾಗಿದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಯಾರ ಕಡೆ ಒಲವು ತೋರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.


ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಮಾಡಲಾಗಿದೆ. ಬಿಜೆಪಿಗೆ ವಿಧಾನಸಭೆಯಲ್ಲಿ ಪಕ್ಷದ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ಎರಡು ಸ್ಥಾನಗಳು ದೊರೆಯಲಿದ್ದು, ಮೂರನೇ ಅಭ್ಯರ್ಥಿಗೆ ಮತಗಳ ಕೊರತೆಯಾಗಲಿದೆ. ಮೂಲಗಳ ಪ್ರಕಾರ ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರ ಪ್ರದೇಶದಿಂದ ಸ್ಫರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ : – ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

ಹೈಕಮಾಂಡ್ ಉತ್ತರ ಪ್ರದೇಶದಿಂದ ಸ್ಫರ್ಧಿಸಲು ಒಲವು ತೋರಿದೆ ಎನ್ನಲಾಗಿದೆ. ನಿರ್ಮಲಾ ಸೀತಾರಾಮನ್ ಸ್ಫರ್ಧಿಸದಿದ್ದರೆ ತೇಜಸ್ವಿನಿ ಅನಂತ್ ಕುಮಾರ್ ಗೆ ರಾಜ್ಯಸಭಾ ಟಿಕೆಟ್ ನೀಡುವ ಸಾಧ್ಯತೆ ಇದೆ. ಎರಡನೇ ಸ್ಥಾನಕ್ಕಾಗಿ ಲೆಹರ್ ಸಿಂಗ್ , ಉದ್ಯಮಿ ಪ್ರಕಾಶ್ ಶೆಟ್ಟಿ, ಕೆ. ಸಿ ರಾಮಮೂರ್ತಿ ಹೆಸರು ಕೇಳಿ ಬರುತ್ತಿದೆ. ಮೂರನೇ ಅಭ್ಯರ್ಥಿಗೆ ಜೆಡಿಎಸ್ ಬೆಂಬಲದ ಅವಶ್ಯಕತೆಯಿದೆ. ಇನ್ನು ಕಾಂಗ್ರೆಸ್ ನಿಂದ ಹಾಲಿ ಸದಸ್ಯ ಜೈರಾಮ್ ರಮೇಶ್ ಗೆ ಟಿಕೆಟ್ ನೀಡೋ ಸಾಧ್ಯತೆ ಇದೆ. ಜೆಡಿಎಸ್ ನಿಂದ ರಾಜ್ಯ ಸಭಾ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭಾ ಸದಸ್ಯರಾಗಲು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : – ಡಿ ಕೆ ಶಿವಕುಮಾರ್ ಗೆ ಬಿಗ್ ಶಾಕ್ – ಜಾರಿ ನಿರ್ದೇಶನಾಲಯದಿಂದ ಚಾರ್ಜ್ ಶೀಟ್ ಸಲ್ಲಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!