ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.
![The importance of being Nirmala Sitharaman — only BJP minister facing media line of fire](https://static.theprint.in/wp-content/uploads/2022/02/2022_2img01_Feb_2022_PTI02_01_2022_000192B.jpg?compress=true&quality=80&w=376&dpr=2.6)
ಎರಡು ಕಾರ್ಯಕ್ರಮಗಳ ಜೊತೆ 3 ದೇಗುಲಗಳ ದರ್ಶನ ಮಾಡಲಿದ್ದಾರೆ. ಶುಕ್ರವಾರ ರಾತ್ರಿ ಮಣಿಪಾಲಕ್ಕೆ ಆಗಮಿಸಿ ತಂಗಿರುವ ಹಣಕಾಸು ಸಚಿವೆ, ಇಂದು ಉಡುಪಿಯಲ್ಲಿ ಮಣಿಪಾಲದ ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ದಾವೋಸ್ ಪ್ರವಾಸಕ್ಕೆ ತೆರಳುವ ವಿಚಾರ ಇಂದು ತೀರ್ಮಾನ ಮಾಡ್ತೀವಿ – ಸಿಎಂ ಬೊಮ್ಮಾಯಿ
![WION EXCLUSIVE: Finance Minister Nirmala Sitharaman talks economy, COVID-19 policy, growth projections](https://cdn.dnaindia.com/sites/default/files/styles/full/public/2020/05/30/907760-nirmala-sitha.jpg)
ಉಡುಪಿ ಕೃಷ್ಣಮಠ ಭೇಟಿ ನೀಡಿ ಪರಿಹಾರ ಸ್ವಾಮೀಜಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿದ್ದು, ಸಂಜೆ ಮಂಗಳೂರಿಗೆ ತೆರಳಿ ವಿಮಾನ ಮೂಲಕ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ : – ನಾಗೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಧನ್ಯವಾದ