ವಿಧಾನ ಪರಿಷತ್ ಚುನಾವಣೆಯಲ್ಲಿ (Vidhana parishath election) ವಾಯುವ್ಯ ಪದವೀಧರ ಕ್ಷೇತ್ರ ದಾಖಲೆ ಗೆಲುವಿಗೆ ಸಾಕ್ಷಿಯಾಗಿದೆ. ಸಚಿವ ಮುರುಗೇಶ್ ನಿರಾಣಿ (Murugesh nirani) ಅವರ ಸಹೋದರ ಹಣಮಂತ ನಿರಾಣಿ (Hanumanth nirani) ದಾಖಲೆಯ 34,693 ಮತಗಳ ಅಂತರದಿಂದ ಗೆದ್ದಿದ್ದಾರೆ.ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ಹಾಗೂ ಸಹೋದರ ಹಣಮಂತ ಆರ್ ನಿರಾಣಿ ಅವರಿಗೆ ಅಭಿನಂದನೆಗಳು ತಿಳಿಸಿದ್ದಾರೆ.
![](https://rajnewskannada.in/wp-content/uploads/2022/06/image-269.png)
ಪ್ರಧಾನಿ ನರೇಂದ್ರ ಮೋದಿ (Narendra modi) ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದು ಸಚಿವ ನಿರಾಣಿ ತಿಳಿಸಿದ್ದಾರೆ. ಕಾರ್ಯಕರ್ತರ ಅವಿರತ ಪರಿಶ್ರಮಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ (Basavaraj bommai) , ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ (BS.Yediyurappa) , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar kateel) , ಸಚಿವರು, ಶಾಸಕರು ಮತ್ತು ಎಲ್ಲಾ ನಾಯಕರ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ : – ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ- ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವು