ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( D.K SHIVKUAMAR ) ಇಂದು ದೆಹಲಿ ರೋಸ್ ಅವೆನ್ಯೂ ಸಂಕೀರ್ಣದಲ್ಲಿರುವ ED ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ED ಅಧಿಕಾರಿಗಳು ಸೂಕ್ತ ದಾಖಲೆಗಳು ನೀಡದ ಕಾರಣ ಪ್ರತಿ ವಾದ ಮಂಡಿಸಲು ಇನ್ನಷ್ಟು ಸಮಯ ಬೇಕು ಎಂದು ಡಿ.ಕೆ ಶಿವಕುಮಾರ್ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಕೋರ್ಟ್ ಜನವರಿ 18ಕ್ಕೆ ವಿಚಾರಣೆ ಮುಂದೂಡಿತು. ಇದನ್ನೂ ಓದಿ : – ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕ್ಷಮೆ ಕೇಳಿದ ಕುಮಾರಸ್ವಾಮಿ
ವಿಚಾರಣೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ಕೋರ್ಟ್ ವಿಚಾರದಲ್ಲಿ ಏನು ಮಾತನಾಡಲು ಸಾಧ್ಯವಿಲ್ಲ ಜಡ್ಜ್ ಏನ್ ಹೇಳ್ತಾರೆ ಅದನ್ನು ಕೇಳಬೇಕು. ಅವರು ಏನ್ ಕೊಟ್ಟರೂ ಪ್ರಸಾದನೇ. ಹಿಂದೆಯೂ ವಿದೇಶಕ್ಕೆ ತೆರಳಲು ಅನುಮತಿ ಕೇಳಿದ್ದೆ. ಕಡೆಯ ಕ್ಷಣದಲ್ಲಿ ಅನುಮತಿ ನೀಡಿದ್ದರಿಂದ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂಚಿತವಾಗಿ ಗಮನಕ್ಕೆ ತಂದಿದ್ದೇವೆ. ಕೋರ್ಟ್ ಏನು ಹೇಳಲಿದೆ ನೋಡಬೇಕು ಎಂದರು.
ಇದನ್ನೂ ಓದಿ : – ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹಾರಾಡಿದ ಪಾಕ್ ಬಾವುಟ…!