ವಿಧಾನ ಪರಿಷತ್ ಚುನಾವಣೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ರಣ ಕಣ ರಂಗೇರಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ (basavaraj horatti ) ವಿರುದ್ಧ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀ ಶೈಲ ನಿಂಗಪ್ಪ ಗಡದಿನ್ನಿ(ningappa gadadini ) ಅವರನ್ನ ಜೆಡಿಎಸ್ ಕಣಕ್ಕಿಳಿಸಿದೆ. ಹೊರಟ್ಟಿ ಅವರ ಒಂದು ಕಾಲದ ಶಿಷ್ಯ, ಇದೀಗ ಗುರುವಿಗೇ ತಿರುಮಂತ್ರ ಹಾಕಲು ಹೊರಟಿದ್ದಾರೆ.
![](https://rajnewskannada.in/wp-content/uploads/2022/05/gvbhghgh.png)
ವಿಧಾನ ಪರಿಷತ್ ಚುನಾವಣೆಯಲ್ಲಿ ಸತತವಾಗಿ 7 ಬಾರಿ ಗೆದ್ದು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇತಿಹಾಸ ನಿರ್ಮಾಣ ಮಾಡಿರುವ ಬಸವರಾಜ ಹೊರಟ್ಟಿ ಅವರಿಗೆ ಈ ಬಾರಿ ಅವರ ಆತ್ಮೀಯ ಶಿಷ್ಯನೇ ಪ್ರತಿಸ್ಪರ್ಧಿ. ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಶ್ರೀಶೈಲ್ ಗಡದಿನ್ನಿ ಹೊರಟ್ಟಿ ಅವರ ಗರಡಿಯಲ್ಲಿ ಪಳಗಿರುವ ಪಟ್ಟದ ಶಿಷ್ಯ.ಶಾಲೆಯ ಶಿಕ್ಷಕರಾಗಿದ್ದ ಶ್ರೀಶೈಲ ಗಡದಿನ್ನಿ ಈಗಾಗಲೇ ಸ್ವಯಂ ನಿವೃತ್ತಿಯನ್ನೂ ಪಡೆದು ಚುನಾವಣಾ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಈ ಹಿಂದೆ ಹೊರಟ್ಟಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗಡದಿನ್ನಿ, ಇದೀಗ ಹೊರಟ್ಟಿ ಅವರ ಎದುರಾಳಿಯಾಗಿ ನಿಂತಿದ್ದಾರೆ. ಗಡದಿನ್ನಿ ಅವರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಪದಾಧಿಕಾರಿಗಳೂ ಸಹ ಬೆಂಬಲ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ :- ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್