ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಶ್ರೀ

ರಾಯಚೂರು: ನವದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ರೆ ರೈತರಾಗುತ್ತಾರೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಪ್ರಶ್ನೆ ಮಾಡಿದರು. ರಾಯಚೂರಿನಲ್ಲಿ ಮಾತನಾಡಿದ ಶ್ರೀಗಳು ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಯುತ್ತಿದೆ. ಅವರು ರೈತರೇ ಅಲ್ಲ, ರೈತರು ಹೊಲದಲ್ಲಿ ದುಡಿಯುತ್ತಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅವಮಾನ, ಖಲಿಸ್ತಾನದ ಪರವಾಗಿ ಘೋಷಣೆ ಮಾಡಿದವರು ಹೇಗೆ ರೈತರಾಗುತ್ತಾರೆ. ರಾಷ್ಟ್ರಕ್ಕೆ ಅವಮಾನ ಮಾಡುವವರು ಹೇಗೆ ರೈತರಾಗುತ್ತಾರೆ ಅಂತ ಪ್ರಶ್ನಿಸಿದರು.

ಪ್ರಚಾರಕ್ಕಾಗಿ ದೇವರು, ಧರ್ಮದ ಬಗ್ಗೆ ಮಾತನಾಡಬಾರದು, ಸಾಹಿತಿ ಕೆ ಎಸ್ ಭಗವಾನ್ ಪ್ರಚೋದನಕಾರಿ ಮಾತನಾಡಿದ್ದು ತಪ್ಪು, ಕೋರ್ಟಿನಲ್ಲಿ ಮಸಿ ಬಳಿದದ್ದು ಸಹ ತಪ್ಪು, ಇಬ್ಬರು ಮಾಡಿದ್ದು ತಪ್ಪು. ಇನ್ನು ರಾಜ್ಯದಲ್ಲಿ ಮೀಸಲಾತಿಗಾಗಿ ಹೋರಾಟ ನಡೆದಿವೆ, ಜಾತಿವಾರು ಮೀಸಲಾತಿ ಕೇಳುತ್ತಿದ್ದಾರೆ, ಎಲ್ಲಾ ಜಾತಿಯಲ್ಲೂ ಕೂಡ ಬಡವರು ಇದ್ದಾರೆ, ಜಾತಿ ಮೀಸಲಾತಿಗಿಂತ, ಆರ್ಥಿಕ ಮೀಸಲಾತಿ ನೀಡಬೇಕು. ಜಾತಿವಾರು ಮೀಸಲಾತಿ ಕೇಳುವುದು ತಪ್ಪು ಎಂದರು.

ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಬೃಹತ್ ಯಂತ್ರಗಳು, ಶಿಲೆಗಳಿವೆ ಹೀಗಾಗಿ ವೀಕ್ಷಣೆಗೆ ಅವಕಾಶ ಮೊದಲಿನಿಂದಲೂ ನೀಡಿಲ್ಲ. ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ ಕೆಲವು ಕಡೆ ಮುಗಿದಿದೆ. ಸದ್ಯ 500 ಕೋಟಿಗೂ ಅಧಿಕ ನಿಧಿ ಸಂಗ್ರಹಣೆ ಆಗಿದೆ. ನಿಧಿ ಸಂಗ್ರಹಣೆ ಅಭಿಯಾನ ಇನ್ನೂ 15 ದಿನಗಳ ಕಾಲ ಮುಂದುವರೆಯಲಿದೆ. ಹಣ ನೀಡುವವರು ಸಹಾಯ ಮಾಡಬಹುದು ಎಂದರು ರಾಮ ಮಂದಿರ ನಿರ್ಮಾಣ ಸಂಸ್ಕಂತಿಯ ಪುನರುತ್ಥಾನದ ಪ್ರತೀಕವಾಗಿದೆ. ನಮ್ಮ ಸನಾತನ ಸಂಸ್ಕಂತಿಯೂ ಮಂದಿರದ ನಿರ್ಮಾಣದ ಜೊತೆಗೆ ಪುನರ್ ನಿರ್ಮಾಣ ಆಗಬೇಕು. ಅಂತ ಪೇಜಾವರ ಮಠದ ವಿಶ್ವಪ್ರಸ್ನನ ತೀರ್ಥ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!