ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ನೈಟ್ ಕರ್ಫ್ಯೂ, ಜನತಾ ಕರ್ಫ್ಯೂ ನಂತರ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಹೀಗಾಗಿ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ರಾಜ್ಯದ ಕೊರೊನಾ ಸೋಂಕಿನ ಪ್ರಮಾಣ, ಬೆಡ್ ವ್ಯವಸ್ಥೆ, ಆಕ್ಸಿಜನ್ ಲಭ್ಯತೆ, ಲಸಿಕೆ ನೀಡುವುದು ಹಾಗೂ ಸೋಂಕಿನ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳ ಕುರಿತು ಪ್ರದಾನಿ ಮಾಹಿತಿ ಪಡೆದರು. ಜೊತೆಗೆ ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯಮಂತ್ರಿಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಪಡೆದುಕೊಂಡರು.
ನಿನ್ನೆಯೂ ಕೂಡ 5 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮಾತನಾಡಿದ್ದರು. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಇದುವರೆಗೆ ಇದ್ದ ಜನತಾ ಕರ್ಫ್ಯೂನಿಂದ ಯಾವುದೇ ಪರಿಣಾಮ ಕಂಡುಬಂದಿಲ್ಲ.
ಇನ್ನೂ ನಾಳೆಯಿಂದ 14 ದಿನಗಳ ಲಾಕ್ಡೌನ್ ನಲ್ಲಿ ಕೊರೊನಾವನ್ನು ನಿಯಂತ್ರಣಕ್ಕೆ ತನ್ನಿ ಎಂದು ಮುಖ್ಯಮಂತ್ರಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿದರು.