ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ನೀಲಸಂದ್ರದ ಆಂಜನೇಯ ದೇಗುಲದ ಮೈಕ್ ನಲ್ಲಿ ಓಂಕಾರ ನಾದ ಹನುಮಾನ್ ಚಾಲೀಸ್ ಹಾಕಲು ಶ್ರೀರಾಮ ಸೇನೆ ಸಜ್ಜುಗೊಂಡಿದ್ದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ – Public TV

ಆಜಾನ್ ವಿರೋಧಿಸಿ ಸುಪ್ರಭಾತ ಅಭಿಯಾನವನ್ನು ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ತಡೆಯುವ ಪ್ರಯತ್ನ ಮಾಡಿದರು. ಈ ಹಿನ್ನೆಲೆಯಲ್ಲಿ ಪೊಲೀಸರ ಜೊತೆ ಹಿಂದೂ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ದರ್ಶನ ಮಾಡುತ್ತೇವೆ ಬಿಡಿ ಎಂದು ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಆದರೆ ಅವಕಾಶ ಕೊಡದ ಪೊಲೀಸರು ಯಾವ ಅವಕಾಶವನ್ನು ಕೊಡಲ್ಲ ಎಂದು ತಿಳಿಸಿದ್ದಾರೆ. ಆಗ ಹಿಂದೂ ಕಾರ್ಯಕರ್ತರು ಧಾರ್ಮಿಕ ಹಕ್ಕು ಇದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ : – 2A ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ – ಜಯಮೃತ್ಯುಂಜಯ ಸ್ವಾಮೀಜಿ

ಅಝಾನ್ ಸಂದರ್ಭದಲ್ಲಿ ಬೆಳಿಗ್ಗೆ ಬೇಗ ಎದ್ದು ಭಜನೆ, ಸುಪ್ರಭಾತ ಮೊಳಗಿಸಿದ ಶ್ರೀರಾಮ ಸೇನಾ  ಕಾರ್ಯಕರ್ತರು! - The Hindustan Gazette Kannada

ಆದರೂ ಅಂಬೇಡ್ಕರ್ ಸರ್ಕಲ್ ನೀಲಸಂದ್ರ ದೇಗುಲದಿಂದ ಅರ್ಧ ಕಿಮೀ ದೂರದಲ್ಲೇ ಪೊಲೀಸರು ಹಿಂದೂ ಕಾರ್ಯಕರ್ತರನ್ನು ತಡೆದಿದ್ದಾರೆ. ನಿಮಗೆ ತಾಕತ್ತಿದ್ರೆ ಮಸೀದಿಗಳ ಆಜಾನ್ ತಡೆಯಿರಿ. ನಮ್ಮನ್ನು ತಡೆಯಬೇಡಿ ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : – ಕಾಂಗ್ರೆಸ್ ನವರಿಗೆ ಪಕ್ಷ ಕಟ್ಟಲು ಗೊತ್ತಿಲ್ಲ..ಇನ್ನು ನಾಡನ್ನು ಏನ್ ಕಟ್ತಾರೆ? – ನಳೀನ್ ಕುಮಾರ್ ಕಟೀಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!