ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಹೀಗಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಫುಲ್ ಹೈಅಲರ್ಟ್ ಆಗಿದ್ದಾರೆ. ಇದರಿಂದಾಗಿ ನಗರದಲ್ಲಿ ಅಂಗಡಿಗಳನ್ನೇಲ ಪೊಲೀಸರು ಬಂದ್ ಮಾಡಿಸುತ್ತಿದ್ದಾರೆ. ರ್ಯಾಪಿಡ್ ಆ್ಯಕ್ಷನ್ ಫೋರ್ಸ್ , ಕ್ಯೂಆರ್ಟಿ ವಜ್ರ, ಆರ್ಎಎಫ್, KSRP ಮತ್ತು DAR ತುಕಡಿ ನಿಯೋಜಿಸಲಾಗಿದ್ದು, ಶಿವಮೊಗ್ಗದ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ರಸ್ತೆ ಕ್ಲೋಸ್ ಮಾಡಿದ್ದಾರೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದಾರೆ. ಇನ್ನು ಮನೆಯಿಂದ ಹೊರಬಂದವರನ್ನು ವಾಪಸ್ ಕಳಿಸುತ್ತಿದ್ದಾರೆ.
ಇತ್ತ, ಇಂದು ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದಾರೆ. ನಿನ್ನೆ ರಾತ್ರಿ ಈದ್ ಮೀಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು. ಈ ಹಿನ್ನೆಲೆಯಲ್ಲಿ 7 ಜನ ಗಾಯಗೊಂಡಿದ್ದರು. ರೋಹನ್, ಧನಂಜಯ್, ಮಾರುತಿ, ಪ್ರದೀಪ್, ಕಿರಣ್, ಭರತ್, ಶಾಂತಮ್ಮಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯ ವಿಚಾರಿಸಿದ ಬಳಿಕ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ನಡೆದ ಮುಸಲ್ಮಾನರ ಮೆರವಣಿಗೆ ರಾಜ್ಯ ಸರ್ಕಾರ ತಲೆ ತಗ್ಗಿಸಬೇಕು. ಮೆರವಣಿಗೆಯಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗಿದ್ದರು. ಇದು ಯಾರಿಗೆ ಎಚ್ಚರಿಕೆ ಹಿಂದೂ ಸಮಾಜದವರಿಗಾ? ಪೊಲೀಸರು ಹೆದರಿ ಹೋಗಿದ್ದಾರೆ ಈ ಸರ್ಕಾರದಿಂದ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.