ಯೋಗದಲ್ಲೂ ರಾಜಕಾರಣ – ಪ್ರತಾಪ್ ಸಿಂಹ, ರಾಮದಾಸ್ ನಡುವೆ ಪೈಪೋಟಿ

ಜೂ. 21 ರಂದು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆ ಬೆನ್ನಲ್ಲೇಯೋಗದಲ್ಲೂ ರಾಜಕಾರಣ ನಡೆಯುತ್ತಿದ್ದು, ಮೈಲೇಜ್ಗಾಗಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್ ನಡುವೆ ಪೈಪೋಟಿ ನಡೆದಿದೆ. ನಗರದ ಅರಮನೆ ಆವರಣದಲ್ಲಿ ಯೋಗ ದಿನಾಚರಣೆಯ ಬಗ್ಗೆ ಮಾಹಿತಿ ನಿಡುತ್ತಿದ್ದ ವೇಳೆ ಮಾಧ್ಯಮಗಳ ಮುಂದೆಯೇ ಇಬ್ಬರು ಬಿಜೆಪಿ ನಾಯಕರ ಜಟಾಪಟಿ ನಡೆದಿದೆ.

ಪ್ರಧಾನಿಯೊಂದಿಗೆ ಪಾಲ್ಗೊಳ್ಳುವ ಯೋಗಪಟುಗಳ ಸಂಖ್ಯೆ ವಿಚಾರದಲ್ಲಿ ದ್ವಂದ್ವವಾಗಿದ್ದು, ಕಾರ್ಯಕ್ರಮದಲ್ಲಿ 7 ರಿಂದ 8 ಸಾವಿರ ಜನರು ಭಾಗವಹಿಸುತ್ತಾರೆ ಎಂದ ಪ್ರತಾಪ್ ಸಿಂಹ ಹೇಳಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ರಾಮದಾಸ್ ಈಗಾಗಲೇ 13 ಸಾವಿರ ನೋಂದಣಿ ಆಗಿದೆ ಎಂದರು. ಇದನ್ನೂ ಓದಿ : –  ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರನಿಗೆ ಕೊಲೆ ಬೆದರಿಕೆ

ಈ ವೇಳೆ ಕೋಪಗೊಂಡ ಪ್ರತಾಪ್ ಸಿಂಹ ಅವರು ನಾನು ಮಾತನಾಡುತ್ತಿದ್ದೇನೆ, ರಾಮದಾಸ್ಜೀ ಸುಮ್ಮನಿರಬೇಕು ಎಂದು ಸಿಡಿಮಿಡಿಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮದಾಸ್ ಅವರು, ಪ್ರತಾಪ್ ಅವರಿಗೆ ಸರಿಯಾದ ಮಾಹಿತಿ ಇರಲಿಲ್ಲ. ಹಾಗಾಗಿ ವಿವರಣೆ ನೀಡಲು ಯತ್ನಿಸಿದೆ. ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದ್ರು.

ಇದನ್ನೂ ಓದಿ : – ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ- ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿರುವ BBMP

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!