ಪುನೀತ್ ಗೆ ಮರಣೋತ್ತರವಾಗಿ ಬಸವ ಶ್ರೀ ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಮುರುಘಾರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ದಿ.ಪುನೀತ್ ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುರಸ್ಕಾರ ಸ್ವೀಕರಿಸಿದರು. ಬಸವಶ್ರೀ ಪ್ರಶಸ್ತಿ 5 ಲಕ್ಷ ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಇದನ್ನು ಓದಿ :- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ – ಬಿ.ವೈ ವಿಜಯೇಂದ್ರ


ಪ್ರಶಸ್ತಿ ಪ್ರದಾನ ಮಾಡಿದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ನಟ ಪುನೀತ್ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡುವ ಮೂಲಕ ಅವರ ಇಡೀ ಕುಟುಂಬಕ್ಕೆ ಮಧ್ಯ ಕರ್ನಾಟಕದಿಂದ ಗೌರವಿಸುವ ಕೆಲಸ ಮಾಡಲಾಗಿದೆ. ರಾಜಕುಮಾರ್ ಮುದ್ದಿನ ಮಗ ಪುನೀತ್.

ಬೆಳ್ಳಿ ತೆರೆಯಲ್ಲಿ ನಟಿಸಿದ ಮಹಾನ್ ಪ್ರತಿಭಾವಂತ. ಅಭಿನಯ-ಅಭಿವ್ಯಕ್ತಿ-ಹಾಡುಗಾರಿಕೆಯಲ್ಲಿ ಅವರು ಪುನೀತ ಎಂದು ಬಣ್ಣಿಸಿದರು. ತಂದೆಯ ಸ್ಪೂರ್ತಿ ಇಟ್ಟುಕೊಂಡು ಆಕಾಶದೆತ್ತರಕ್ಕೆ ಬೆಳೆದವರು, ಇಂತಹ ಪ್ರತಿಭಾವಂತರನ್ನು ಪಡೆದ ಕನ್ನಡನಾಡು ಮಾನ್ಯ, ನಾವೆಲ್ಲರೂ ಧನ್ಯ ಎಂದರು.

ಇದನ್ನು ಓದಿ :- ನಂಜನಗೂಡಿನಲ್ಲಿ ದೇವರ ತಾಳಿ ಕದ್ದ ಕಳ್ಳರು – ಪಶ್ಚಾತಾಪದಿಂದ ವಾಪಸ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!