ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.
![](https://rajnewskannada.in/wp-content/uploads/2022/05/01.png)
ಮುರುಘಾರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ದಿ.ಪುನೀತ್ ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುರಸ್ಕಾರ ಸ್ವೀಕರಿಸಿದರು. ಬಸವಶ್ರೀ ಪ್ರಶಸ್ತಿ 5 ಲಕ್ಷ ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಇದನ್ನು ಓದಿ :- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ – ಬಿ.ವೈ ವಿಜಯೇಂದ್ರ
![](https://rajnewskannada.in/wp-content/uploads/2022/05/02-2.png)
ಪ್ರಶಸ್ತಿ ಪ್ರದಾನ ಮಾಡಿದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ನಟ ಪುನೀತ್ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡುವ ಮೂಲಕ ಅವರ ಇಡೀ ಕುಟುಂಬಕ್ಕೆ ಮಧ್ಯ ಕರ್ನಾಟಕದಿಂದ ಗೌರವಿಸುವ ಕೆಲಸ ಮಾಡಲಾಗಿದೆ. ರಾಜಕುಮಾರ್ ಮುದ್ದಿನ ಮಗ ಪುನೀತ್.
![](https://rajnewskannada.in/wp-content/uploads/2022/05/03-1.png)
ಬೆಳ್ಳಿ ತೆರೆಯಲ್ಲಿ ನಟಿಸಿದ ಮಹಾನ್ ಪ್ರತಿಭಾವಂತ. ಅಭಿನಯ-ಅಭಿವ್ಯಕ್ತಿ-ಹಾಡುಗಾರಿಕೆಯಲ್ಲಿ ಅವರು ಪುನೀತ ಎಂದು ಬಣ್ಣಿಸಿದರು. ತಂದೆಯ ಸ್ಪೂರ್ತಿ ಇಟ್ಟುಕೊಂಡು ಆಕಾಶದೆತ್ತರಕ್ಕೆ ಬೆಳೆದವರು, ಇಂತಹ ಪ್ರತಿಭಾವಂತರನ್ನು ಪಡೆದ ಕನ್ನಡನಾಡು ಮಾನ್ಯ, ನಾವೆಲ್ಲರೂ ಧನ್ಯ ಎಂದರು.
ಇದನ್ನು ಓದಿ :- ನಂಜನಗೂಡಿನಲ್ಲಿ ದೇವರ ತಾಳಿ ಕದ್ದ ಕಳ್ಳರು – ಪಶ್ಚಾತಾಪದಿಂದ ವಾಪಸ್