ಬೆಳಗಾವಿ ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿಗೆ ಜೈ ಎಂದ ಶಿಕ್ಷಕರು

ಬೆಳಗಾವಿ ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಜ್ಯೋತಿ ಕಾಲೇಜಿನ ಹೊರಗಡೆ ವಿಜಯೋತ್ಸವ ಮುಗಿಲು ಮುಟ್ಟಿದೆ. ಪ್ರಕಾಶ್ ಹುಕ್ಕೇರಿ ಅಭಿಮಾನಿಗಳು, ಕಾರ್ಯಕರ್ತರು ಗುಲಾಲು ಹಾರಿಸಿ ಸಂಭ್ರಮಿಸಿದ್ರು. ಪ್ರಕಾಶ ಹುಕ್ಕೇರಿ ಪರ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದ್ರು.


ಇನ್ನೂ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ ಸೋಲೊಪ್ಪಿಕೊಂಡಿದ್ದಾರೆ. ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಣದ ಪ್ರವಾಹ, ರಾಜಕೀಯದಿಂದ ಸೋಲು ಉಂಟಾಗಿದೆ. ಸೋಲಿನಿಂದ ಸಾಕಷ್ಟು ಪಾಠ ಕಲಿತಿದ್ದೇನೆ. ಸೋಲನ್ನ ಸ್ವೀಕಾರ ಮಾಡ್ತೀನಿ. ಪಕ್ಷದ ಎಲ್ಲರೂ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ಪ್ರಜಾತಂತ್ರದಲ್ಲಿ ನಂಬಿಕೆ ಇದೆ, ಶಿಕ್ಷಕರ ಪರವಾಗಿ ಇದ್ದೇನೆ. ಸೋಲಿಗೆ ಕಾರಣ, ಆತ್ಮಾವಲೋಕ ಮಾಡ್ತಿನಿ ಎಂದು ಹೇಳಿದ್ರು. ಇದನ್ನೂ ಓದಿ : –  ಗೂಂಡಾಗಿರಿ ಎಂಬುದು ಕಾಂಗ್ರೆಸ್ ನಾಯಕರಿಗೆ ವಂಶ ಪಾರಂಪರ್ಯವಾಗಿ ಬಂದ ಉಡುಗೊರೆ – ಕಾಂಗ್ರೆಸ್ ವಿರುದ್ದ ಬಿಜೆಪಿ ಟ್ವೀಟ್

ಇದೇ ವೇಳೆ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರದಿಂದ ಸೋಲು ಉಂಟಾಗಿದೆ. ಶಿಕ್ಷಣ ಕ್ಷೇತ್ರದ ಬಗ್ಗೆ ಜನ ನಂಬಿಕೆ ಕಳೆದುಕೊಳ್ಳುವಾಗ ನನ್ನ ಪರವಾಗಿ ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದ. ಈ ಸಮಯದಲ್ಲಿ ನಾನು ಸಾಕಷ್ಟು ಪಾಠ ಕಲಿತಿದ್ದೇನೆ. ನನ್ನ ಪಕ್ಷದ ಸಚಿವರು ಶಾಸಕರು ಒಳ್ಳೆಯ ಮನಸ್ಸಿನಿಂದ ಕೆಲಸ ಮಾಡಿದ್ದಾರೆ. ಉಮೇಶ್ ಕತ್ತಿ ಅವರು ಚುನಾವಣೆ ರದ್ದು ಮಾಡಬೇಕು ಎಂಬ ಹೇಳಿಕೆ ವೇಳೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಅವರು ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : – ಕಾನೂನಿನ ಮುಂದೆ ರಾಹುಲ್ ಗಾಂಧಿ, ಯಡಿಯೂರಪ್ಪ ಒಂದೇ – ಬಿಎಸ್ ವೈ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!