ಉಗ್ರಂ ಖ್ಯಾತಿಯ ನಟ ಶ್ರೀಮುರಳಿ ಹಾಗೂ ಕೆಜಿಎಫ್ ಯಶಸ್ಸಿನಲ್ಲಿರುವ ಪ್ರಶಾಂತ್ ನೀಲ್ ಮತ್ತೆ ಒಂದಾಗಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನಲ್ಲಿ ನೆರವೇರಿದೆ.
![](https://rajnewskannada.in/wp-content/uploads/2022/05/WhatsApp-Image-2022-05-21-at-3.45.57-PM.jpeg)
ಚಿತ್ರಕ್ಕೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಹೊಂಬಾಳೆ ಫಿಲ್ಮ್ ನ ಮತ್ತೊಂದು ಅದ್ದೂರಿ ಚಿತ್ರ ‘ಬಘೀರ’ ಇಂದು ಸೆಟ್ಟೇರಿದ್ದು, ಈ ಚಿತ್ರದ ಮೂಲಕ ಉಗ್ರಂ ಖ್ಯಾತಿಯ ಶ್ರೀಮುರಳಿ ಮತ್ತು ಪ್ರಶಾಂತ್ ನೀಲ್ ಜೋಡಿ ಮತ್ತೆ ಒಂದಾಗಿದೆ. ಇದನ್ನೂ ಓದಿ :- ನಟ ಆದಿ ಪಿನಿಶೆಟ್ಟಿ ಜೊತೆ ಸಪ್ತಪದಿ ತುಳಿದ ನಟಿ ನಿಕ್ಕಿ ಗಲ್ರಾನಿ
ಈ ಬಾರಿ ಅವರು ನಿರ್ದೇಶನದ ಮೂಲಕ ಅಲ್ಲ ಬದಲಿಗೆ ಕಥೆ ಮೂಲಕ ಶ್ರೀಮುರಳಿ ಚಿತ್ರದಲ್ಲಿ ಕೈ ಜೋಡಿಸಿದ್ದಾರೆ.
ಈ ಬಘೀರ ಚಿತ್ರಕ್ಕೆ ಡಾ.ಸೂರಿ ಚಿತ್ರಕಥೆ, ನಿರ್ದೇಶನ ಮಾಡಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ.ಜೆ. ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ :- ಮುಸ್ಲಿಂ ಸಂಪ್ರದಾಯದಂತೆ ಸೀಮಂತ ಮಾಡಿಕೊಂಡ ಸಂಜನಾ ಗರ್ಲಾನಿ