ರಾಷ್ಟ್ರಪತಿ ಚುನಾವಣೆ- ಎಲ್ಲರ ಚಿತ್ತ ದೆಹಲಿಯತ್ತ ‘ಮಮತಾ’ ನೇತೃತ್ವದಲ್ಲಿ ಸಭೆ, ಹೆಚ್ ಡಿಕೆ ಭಾಗಿ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ(Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳಿಂದ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಕಣಕ್ಕೆ ನಿಲ್ಲಿಸುತ್ತಾರೆ.

ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆಯೇ ಎಂಬ ಚರ್ಚೆ ದಟ್ಟವಾಗಿದೆ. ಇಂದು ಅಪರಾಹ್ನ 3 ಗಂಟೆಗೆ ದೆಹಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರ ಸಭೆ ನಡೆಯಲಿದ್ದು 22 ವಿರೋಧ ಪಕ್ಷಗಳನ್ನು ಅವರು ಸಭೆಗೆ ಕರೆದಿದ್ದಾರೆ.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ಸಭೆ ನಡೆಯಲಿದ್ದು, ಎಲ್ಲರ ಚಿತ್ತ ದೆಹಲಿಯತ್ತ ಮನೆಮಾಡಿದೆ. ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಈಗಾಗಲೇ ದೆಹಲಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ತೆರಳಿದ್ದಾರೆ.

ಇದನ್ನೂ ಓದಿ :- ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ- ಮತ ಎಣಿಕೆ ಆರಂಭ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!