ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಆಡಿಯೋ ಬಿಡುಗಡೆ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಿತ್ತು. ಈ ನೋಟಿಸ್ಗೆ ನಾಲ್ಕು ಪುಟಗಳ ಸುದೀರ್ಘ ಉತ್ತರ ನೀಡಿರುವ ಪ್ರಿಯಾಂಕ್ “ನಿಮ್ಮ ನೋಟಿಸ್ ಮುಕ್ತ ಹಾಗೂ ಪಾರದರ್ಶಕ ತನಿಖೆಯ ಉದ್ದೇಶ ಹೊಂದಿಲ್ಲ” ಎಂದು ಹೇಳಿದ್ದಾರೆ.
![ರಾಮುಲು ಮಾತ್ರ ಸ್ವಾಭಿಮಾನಿ, ಉಳಿದವರು ನಾಲಾಯಕ್ಗಳಾ: ಸಚಿವ ಪ್ರಿಯಾಂಕ್ ಖರ್ಗೆ –](https://www.vijayavani.net/wp-content/uploads/2018/01/priyank-kharge.jpg)
ಗುರುವಾರ ಸಿಐಡಿ ಡಿಜಿಪಿಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ ಪ್ರಿಯಾಂಕ್ ಖರ್ಗೆ,ನಾನು ಹಗರಣದ ಕೇಂದ್ರ ಬಿಂದುವಾಗಿರುವ ಕಲಬುರಗಿ ಜಿಲ್ಲೆಯ ಜನಪ್ರತಿನಿಧಿ ಆಗಿದ್ದೇನೆ. ಜನಪ್ರತಿನಿಧಿಯಾಗಿ ಸಾರ್ವಜನಿಕ ವಲಯದಲ್ಲಿ ಇರುವ ಹಲವು ಮಾಹಿತಿಗಳು ನನಗೆ ಲಭ್ಯವಾಗುತ್ತದೆ. ಇದನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದೇನೆ. ಈ ಮಾಹಿತಿಯನ್ನು ನೀವು ನೋಟಿಸ್ ಮೂಲಕ ತನ್ನಿಂದ ಪಡೆಯಲು ನಿರ್ಧಾರ ಮಾಡಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ. ನೀವು ನೀಡಿರುವ ನೋಟಿಸ್ ಆಧಾರ ರಹಿತವಾಗಿದೆ ಹಾಗೂ ಗೊಂದಲದಿಂದ ಕೂಡಿದೆ. ನಿಮ್ಮ ಈ ನಡೆ ಅಧಿಕಾರದಲ್ಲಿರುವವರನ್ನು ತೃಪ್ತಿ ಪಡಿಸುವ ಉದ್ದೇಶದಂತೆ ಕಾಣುತ್ತಿದೆ. ನಿಮ್ಮ ನೋಟಿಸ್ ಮುಕ್ತ ಹಾಗೂ ಪಾರದರ್ಶಕ ತನಿಖೆಯ ಉದ್ದೇಶ ಹೊಂದಿಲ್ಲ.ಈ ನಡೆ ಕೇವಲ ಕಾನೂನು ಬಾಹಿರ ಮಾತ್ರವಲ್ಲ, ಕಾನೂನಿನ ದುರುಪಯೋಗವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ತನಿಖಾ ಸಂಸ್ಥೆಯಾಗಿ ಈ ಮಾಹಿತಿ ಎಲ್ಲರಿಗಿಂತ ಮೊದಲೇ ನಿಮಗೆ ದೊರಕಬೇಕಾಗಿತ್ತು. ಆದರೆ, ಹೀಗಿರುವ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ತನಿಖಾ ಸಂಸ್ಥೆ ಕಾನೂನು ಪ್ರಕಾರವಾಗಿಯೇ ಕಾರ್ಯನಿರ್ವಹಿಸಬೇಕು. ನೀವು ನನಗೆ ಸಿಆರ್ಪಿಸಿ ಸೆಕ್ಷನ್ 91 ಅಡಿಯಲ್ಲಿ ನೋಟಿಸ್ ನೀಡಿದ್ದೀರಿ.
![ಜಾಧವ ದ್ವಂದ್ವ ನಿಲುವಿನಿಂದ ಹಿಂದುಳಿದವರಿಗೆ ಅನ್ಯಾಯ'; ಶಾಸಕ ಪ್ರಿಯಾಂಕ್ ಖರ್ಗೆ | Prajavani](https://www.prajavani.net/sites/pv/files/article_images/2021/08/14/file7fslxei9z1j1ijoglmsf1628949547.jpg)
ಈ ಸೆಕ್ಷನ್ ಅಡಿ ನೀವು ಯಾವ ನಿರ್ದಿಷ್ಟ ದಾಖಲೆಗಳನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಬೇಕು ಎಂಬುವುದನ್ನು ಆ ವ್ಯಕ್ತಿಗೆ ತಿಳಿಸಬೇಕು. ಆತ ಆ ದಾಖಲಾತಿಗಳನ್ನು ಹೊಂದಿದ್ದಾನೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿವರಿಸಿದ್ದಾರೆ.
ಇದನ್ನೂ ಓದಿ :- ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರದ ಕುಮ್ಮಕ್ಕಿದೆ – ಸಿದ್ದರಾಮಯ್