ಲೈಂಗಿಕ ಕಾರ್ಯಕರ್ತೆಯರ ಪರವಾಗಿ ಸುಪ್ರೀಂ ಕೋರ್ಟ್ (SUPREMECOURT) ಮಹತ್ವದ ಆದೇಶ ನೀಡಿದೆ. ವೇಶ್ಯಾವಾಟಿಕೆ (PROSTITUTE) ಕಾನೂನು ಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ (CRIMINAL) ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.
![](https://rajnewskannada.in/wp-content/uploads/2022/05/WhatsApp-Image-2022-05-26-at-6.08.57-PM.jpeg)
ವೇಶ್ಯಾವಾಟಿಕೆಯು ಒಂದು ವೃತ್ತಿಯಾಗಿದೆ ಮತ್ತು ಲೈಂಗಿಕ ಕಾರ್ಯಕರ್ತೆಯರು ಕಾನೂನಿನಡಿಯಲ್ಲಿ ಘನತೆ ಮತ್ತು ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ಕಾಪಾಡಲು ಆರು ನಿರ್ದೇಶನಗಳನ್ನು ನೀಡಿದೆ. ಇದನ್ನೂ ಓದಿ :- ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜೊತೆ ಚರ್ಚೆ ಮಾಡಲಾಗಿದೆ – ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್
![](https://rajnewskannada.in/wp-content/uploads/2022/05/image-31-1024x576.png)
ಲೈಂಗಿಕ ಕಾರ್ಯಕರ್ತರು ಕಾನೂನಿನ ರಕ್ಷಣೆಗೆ ಸಮಾನವಾಗಿ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ಎಲ್ಲಾ ಪ್ರಕರಣಗಳಲ್ಲಿ ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆ ಆಧಾರದ ಮೇಲೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವುದು ಅಥವಾ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದೆ. ಇದನ್ನೂ ಓದಿ :- ದೇವೇಗೌಡರ ವಂಶ ನನಗೂ ಒಂದು ಆದರ್ಶ – ಕೆ.ಎಸ್ ಈಶ್ವರಪ್ಪ
![](https://rajnewskannada.in/wp-content/uploads/2022/05/image-32.png)
ಅವರನ್ನು ವೃತ್ತಿಯ ಆಧಾರದ ಮೇಲೆ ಅಳೆಯುವುದರಿಂದ ಯಾವುದೇ ಲಾಭವಿಲ್ಲ. ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಈ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾಗಿ ಬದುಕುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
![](https://rajnewskannada.in/wp-content/uploads/2022/05/image-33.png)
ಸ್ವಯಂಪ್ರೇರಿತ ಲೈಂಗಿಕ ಕೆಲಸವು ಕಾನೂನುಬಾಹಿರವಲ್ಲ ಮತ್ತು ವೇಶ್ಯಾಗೃಹ ನಡೆಸುವುದು ಕಾನೂನುಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲಿನ ದಾಳಿಯಲ್ಲಿ ಲೈಂಗಿಕ ಕಾರ್ಯಕರ್ತರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು, ಅವರನ್ನ ಬಲಿಪಶು ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ :- ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ