PSI ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಲಬುರಗಿಯಿಂದ ಹುಟ್ಟಿಕೊಂಡ ಈ ಪ್ರಕರಣದ ನಂಟು ಇದೀಗ ಬೆಂಗಳೂರು, ಹಾಸನ, ಕೋಲಾರ ಸೇರಿ ರಾಜ್ಯಾದ್ಯಂತ ಹಬ್ಬುತ್ತಿದೆ. ಈ ಹೊತ್ತಿನಲ್ಲೇ, ನೊಂದ ಪಿಎಸ್ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿರುವ ಪತ್ರವೊಂದು ರಾಜ್ಯದ ಜನರ ಮನಕಲುಕುವಂತೆ ಮಾಡಿದೆ. ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ 2 ಪುಟಗಳ ಪತ್ರ ಬರೆದು ತಮಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : – ಬುದ್ದ ಪೌರ್ಣಮಿ ಹಿನ್ನಲೆ – ನೇಪಾಳದ ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಕೆಲಸ ಮಾಡಿ ನ್ಯಾಯ ಕೊಡಿಸುತ್ತಾರೆ ಅನ್ನೋ ನಂಬಿಕೆಯಿದೆ. ಒಂದು ವೇಳೆ ನ್ಯಾಯ ಕೊಡಿಸದೇ ಹೊದರೆ ನಾವೂ ಮುಂದೆ ಟೆರರಿಸ್ಟ್ಗಳ ಜೊತೆ ಕೈಜೋಡಿಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತಹ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಪರೀಕ್ಷೆಗಳನ್ನು ಬರೆಯುವುದಿಲ್ಲ. ಟೆರೆರಿಸ್ಟ್ಗಳು, ನಕ್ಸಲರ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದು ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ.
ನಾವು 8 ಮಂದಿ ಇದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದೇವೆ. ಪಿಎಸ್ಐ ಪರೀಕ್ಷೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಬಳಿಕ 2021ರಲ್ಲಿ ನಡೆದ ಎಫ್ ಡಿ ಎಂ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಅದನ್ನು ಸಹ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಮೋದಿ ಜೀ ಎಂದು ಪತ್ರದ ಮೂಲಕ ನೊಂದ ಅಭ್ಯರ್ಥಿಗಳು ಕೋರಿದ್ದಾರೆ.
ಇದನ್ನೂ ಓದಿ : – ಕೋವಿಡ್ ಕಂಟ್ರೋಲ್ – ಶಾಂಘೈನ ಹಲವೆಡೆ ಲಾಕ್ ಡೌನ್ ತೆರವು