ಪುನೀತ್ ರಾಜ್ ಕುಮಾರ್ ( puneeth rajkumar ) ದೈಹಿಕವಾಗಿ ನಮ್ಮನ್ನಗಲಿ ಇಂದಿಗೆ 1 ವರ್ಷ ತುಂಬಿದೆ. ಮೊದಲ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಬೆಂಗಳೂರಿನ ಕಂಠೀವರ ಸ್ಟುಡಿಯೋ ( kanteerava studio ) ದಲ್ಲಿರುವ ಅಪ್ಪು ಸಮಾಧಿ ದರ್ಶನವನ್ನು ಅವರ ಅಭಿಮಾನಿಗಳು ಪಡೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ( arvind kerjiwal ) ಕೂಡ ಟ್ವೀಟ್ ಮಾಡುವ ಮೂಲಕ ಅಪ್ಪುವಿಗೆ ನಮನ ಸಲ್ಲಿಸಿದ್ದಾರೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ. ಡಾ. ಪುನೀತ್ ರಾಜ್ಕುಮಾರ್ ಅವರನ್ನು ನಾನು ಗಾಢವಾಗಿ ನೆನಪಿಸಿಕೊಳ್ಳುತ್ತೇನೆ. ಅವರ ಚಲನಚಿತ್ರಗಳು, ಹಾಡುಗಳು, ದಯೆ ಮತ್ತು ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ತೊರೆದಿಲ್ಲ ಎಂದು ನಮಗೆ ಅನಿಸುತ್ತದೆ. ಅವರು ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : – ಎಂ.ಟಿ.ಬಿ ನಾಗರಾಜ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ – ಆರಗ ಜ್ಞಾನೇಂದ್ರ