ಮಳೆಯ ಆರ್ಭಟಕ್ಕೆ ನಲುಗಿದ ರಾಮನಗರ – ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗೆ ಮಾಜಿ ಸಿಎಂ ಹೆಚ್.ಡಿ.ಕೆ ಮನವಿ

ರಾಮನಗರ ( ramanagara ) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಜಮೀನು, ಮನೆಗಳು ಜಲಾವೃತಗೊಂಡಿದ್ದು, ರಾಮನಗರ ಪಟ್ಟಣ, ಅರ್ಕೇಶ್ವರ ಕಾಲೋನಿ ಮುಳುಗಡೆಯಾಗಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಮನಗರ, ಚನ್ನಪಟ್ಟಣದಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ಬ್ಲಾಕ್ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ರಾಮನಗರದ ಹನುಮಂತನಗರದಲ್ಲಿ ರಂಗರಾಯನದೊಡ್ಡಿ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದಲ್ಲಿ ನೀರು ಹರಗೆ ಹರಿದು ಬರುತ್ತಿದೆ. ಪರಿಣಾಮವಾಗಿ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, ಮಮತಾ, ರಾಮಣ್ಣ, ರಾಜೀವ್ ಎಂಬವರ 3 ಮನೆಗಳು ಜಲಾವೃತಗೊಂಡು ಕುಟುಂಬಸ್ಥರು ಹೊರಬರಲಾಗದೆ ಪರದಾಡುವಂತಾಗಿದೆ.ಇದನ್ನೂ ಓದಿ : – ರಾಜ್ಯದಲ್ಲಿ ಇಂದು ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದೆ – ಹವಾಮಾನ ಇಲಾಖೆ ಮುನ್ಸೂಚನೆ


ರಾಮನಗರದ ಕನಕಪುರ ಸರ್ಕಲ್ ಬಳಿ ಜಲಾವೃತಗೊಂಡ ಪರಿಣಾಮ ಬೆಂಗಳೂರು ಮೈಸೂರು ಸಂಪರ್ಕ ಕಡಿತಗೊಂಡಿದೆ. ರಂಗರಾಯನದೊಡ್ಡಿ ಕೆರೆ ಕೊಡಿ ಬಿದ್ದ ರಸ್ತೆ ಮೇಲೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೀರು ಹರಿದು ಹೋಗುತ್ತಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಕಿಲೋ ಮೀಟರ್ಗೂ ಹೆಚ್ಚು ವಾಹನಗಳು ಹೆದ್ದಾರಿಯಲ್ಲಿ ನಿಲ್ಲುವಂತಾಗಿದೆ.

ರಾಮನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ( kumaraswamy ) ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಮುಖ್ಯ ಕಾರ್ಯರ್ದಶಿ ಮತ್ತು ರಾಮನಗರ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕುಮಾರಸ್ವಾಮಿ, ನೀರಿನಲ್ಲಿ ಸಿಲುಕಿಕೊಂಡಿರುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ತಕ್ಷಣ ಎರಡು ಬೋಟ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : – ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!