ಮೇವು ಹಗರಣದ 5ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಇಂದು 5 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.
ಜಾರ್ಖಂಡ್ ನ ಡೊರೆಂಡಾ ಖಜಾನೆಯಿಂದ 139 ಕೋಟಿ ರೂ. ದುರ್ಬಳಕೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಗೆ 5 ವರ್ಷ ಜೈಲು ಶಿಕ್ಷೆ ಜೊತೆಗೆ 60 ಲಕ್ಷ ರೂ. ದಂಡ ವಿಧಿಸಲಾಗಿದೆ.
ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಲಾಲೂ ಪ್ರಸಾದ್ ಯಾದವ್ ಅವರ ವಕೀಲರು ನಿರ್ಧರಿಸಿದ್ದು, ಈಗಾಗಲೇ ಜೈಲಿನಲ್ಲಿ ಹಲವಾರು ವರ್ಷ ಕಳೆದಿರುವುದನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣದಲ್ಲಿ ಅರ್ಧ ಕಡಿತ ಮಾಡಬೇಕು ಎಂದು ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.