ರೌಡಿಶೀಟರ್ ಶಿವಶಂಕರ್ ರೆಡ್ಡಿ ಮೇಲೆ ಗುಂಡಿನ ದಾಳಿ ಪ್ರಕರಣ – ಆರೋಪಿಗಳ ಬಂಧನಕ್ಕೆ ಮೂರು ತನಿಖಾ ತಂಡ ರಚನೆ

ಬೆಂಗಳೂರಿ (Bengaluru) ನಲ್ಲಿ ಆಂಧ್ರ (Andhra) ದ ರೌಡಿಶೀಟರ್ (Rowdysheter) ಶಿವಶಂಕರ್ ರೆಡ್ಡಿ (Shivashankar reddy) ಸೇರಿದಂತೆ ಇಬ್ಬರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಆರೋಪಿಗಳ ಬಂಧನಕ್ಕೆ ಪೊಲೀಸರು ಮೂರು ತನಿಖಾ ತಂಡಗಳನ್ನು ರಚಿಸಿದ್ದಾರೆ.

ಬೆಂಗಳೂರಿ (Bengaluru) ನಲ್ಲಿ ಆಂಧ್ರದ ರೌಡಿಶೀಟರ್ (Rowdysheter) ಶಿವಶಂಕರ್ ರೆಡ್ಡಿ (Shivashankar reddy) ಸೇರಿದಂತೆ ಇಬ್ಬರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಆರೋಪಿಗಳ ಬಂಧನಕ್ಕೆ ಪೊಲೀಸರು ಮೂರು ತನಿಖಾ ತಂಡಗಳನ್ನು ರಚಿಸಿದ್ದಾರೆ.

ಮೂರು ಕೊಲೆ ಮತ್ತು ಒಂದು ಕೊಲೆ ಯತ್ನದಲ್ಲಿ ಶಿವಶಂಕರ್ ರೆಡ್ಡಿ ಭಾಗಿಯಾಗಿದ್ದ. ಶಿವಶಂಕರ್ ರೆಡ್ಡಿ ಹಾಗೂ ಬೈರಾ ರೆಡ್ಡಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ದ್ವೇಷ ಹೊಂದಿತ್ತು. ಅದರಂತೆ 17ನೇ ವಯಸ್ಸಿನಲ್ಲಿ ಮೊದಲ ಕೊಲೆ ಮಾಡಿದ್ದ ಶಿವಶಂಕರ್ ರೆಡ್ಡಿ, 18ನೇ ವಯಸ್ಸಿನಲ್ಲಿ ಎರಡನೇ ಕೊಲೆ ಮಾಡಿದ್ದ. ಬಳಿಕ 23ನೇ ವರ್ಷದಲ್ಲಿ ಮೂರನೇ ಕೊಲೆ ಮಾಡಿದ್ದ. 2021ರಲ್ಲಿ ಶಿವಶಂಕರ್ ವಿರುದ್ಧ ಕೊಲೆ ಯತ್ನ ಪ್ರಕರಣ ಕೂಡ ದಾಖಲಾಗಿತ್ತು. ಇದನ್ನು ಓದಿ : –  ನಮ್ಮನ್ನ ಕರ್ನಾಟಕಕ್ಕೆ ಸೇರ್ಪಡೆ ಮಾಡಿ ಅಂತಾ 11 ಗ್ರಾಮ ಪಂಚಾಯತಿ ಠರಾವು..!

ಆಂಧ್ರಪ್ರದೇಶ (Andhra pradesh) ದ ಮದನಪಲ್ಲಿ ಠಾಣೆ ರೌಡಿಶೀಟರ್ ಆಗಿರುವ ಆರೋಪಿ ಶಿವಶಂಕರ್ ರೆಡ್ಡಿ ಮೇಲೆ ಸುಪಾರಿ ಕಿಲ್ಲರ್ಸ್ ಮೂಲಕ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ 3 ತನಿಖಾ ತಂಡಗಳನ್ನು ರಚನೆ ಮಾಡಲಾಗಿದೆ. ವೈಎಸ್ಆರ್ಸಿಪಿಯಲ್ಲಿ ಗುರುತಿಸಿಕೊಂಡಿದ್ದ ರೌಡಿಶೀಟರ್ ರೆಡ್ಡಿ, ಮದನಪಲ್ಲಿ ವಿಧಾನಸಭಾ ಕ್ಷೇತ್ರದ ಯೂತ್ ಘಟಕದಲ್ಲಿ ಸಕ್ರಿಯವಾಗಿದ್ದ.

ಇದನ್ನು ಓದಿ : – ಇಲ್ಲಿದೆ ನೋಡಿ ವಸಿಷ್ಠಸಿಂಹ – ಹರಿಪ್ರಿಯಾ ಎಂಗೇಂಜ್ ಮೆಂಟ್ ಪೋಟೋಸ್…!

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!