ಲಾಕ್ ಡೌನ್ ಮತ್ತು ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ವಿವಿಧ ಅಸಂಘಟಿತ ಹಾಗೂ ಕಾರ್ಮಿಕ ಹಾಗೂ ರೈತ ಸಮುದಾಯಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವರ ನೇತೃತ್ವದ ಸಭೆಯ ನಂತರ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಅತ್ಯಗತ್ಯ ವಸ್ತುಗಳು ನಿರ್ವಹಣೆಗಾಗಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಖರೀದಿ ಹಾಗೂ ಅಗತ್ಯ ಸೇವೆಗಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ಘೋಷಿಸಿದ ಪ್ಯಾಕೇಜ್
ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೆರ್ 10 ಸಾವಿರ ರೂ.ನಂತೆ ಪರಿಹಾರ ಘೋಷಿಸಲಾಗಿದ್ದು, 20 ಸಾವಿರ ಜನರಿಗೆ ನೆರವಾಗಲಿದೆ.
ಹಣ್ಣು, ಬೆಳೆ ತಕರಾರಿ ನಷ್ಟಕ್ಕೆ 1 ಹೆಕ್ಟರ್ ಗೆ 10 ಸಾವಿರ ಸಹಾಯಧನ 69-70 ಸಾವಿರ ಜನರಿಗೆ ಅನುಕೂಲವಾಗಲಿದೆ.
ಆಟೋ, ಟ್ಯಾಕ್ಸಿ ಚಾಲಕರಿಗೆ ತಲಾ 3 ಸಾವಿರ ರೂ. ಸಹಾಯಧನ ನೀಡಲಿದ್ದು, ಇದಕ್ಕಾಗಿ 63 ಕೋಟಿ ರೂ. ವೆಚ್ಚವಾಗಲಿದೆ.
ಕಟ್ಟಡ ಕಾರ್ಮಿಕರಿಗೆ 10 ಸಾವಿರ ಕೋಟಿ ರೂ. ನೆರವು 450 ಕೋಟಿ ರೂ.ವೆಚ್ಚ
ಕಮ್ಮರರು, ಚಮ್ಮಾರರು, ಕೂಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ಸಹಾಯಧನ ನೀಡಲಾಗುವುದು.
ರಸ್ತೆ ಬೀದಿ ಬದಿ ವ್ಯಾಪಾರಿಗಳಿಗ ತಲಾ 2 ಸಾವಿರ ರೂ. ನಂತರ 2.20 ಲಕ್ಷ ಜನರಿಗೆ ನೆರವಾಗಲಿದೆ.
ಕಲಾವಿದರು ಮತ್ತು ಕಲಾ ತಂಡಗಳಿಗೆ ತಲಾ 3 ಸಾವಿರ ರೂ. ನೆರವು
ರೈತರು, ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಮರು ಪಾವತಿಸದ ಕಂತುಗಳ ಪಾವತಿ ಅವಧಿಯನ್ನು ಜುಲೈ ತಿಂಗಳವರೆಗೆ ವಿಸ್ತರಿಸಲಾಗಿದೆ.
ಪ್ರಧಾನಿ ಮಂತ್ರಿ ಗರೀಬ್ ಅನ್ನ ಯೋಜನೆಯಡಿ ಜೂನ್ ತಿಂಗಳಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿದರರಿಗೆ 5 ಕೆಜಿ ಸೇರಿದಂತೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು.